Bangalore

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ […]

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್ ➤ ಖಾತೆಗೆ 2000 ರೂ. ಜಮಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತ ಫಲಾನುಭವಿಗಳಿಗೆ ಇಂದು ರಾಜ್ಯ ಸರ್ಕಾರದ ಎರಡನೇ ಕಂತು ಜಮಾ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ 2022 -23ನೇ ಸಾಲಿನ ಎರಡನೇ ಕಂತಿನ ಆರ್ಥಿಕ ನೆರವು 975 ಕೋಟಿ ರೂ. ಮೊತ್ತವನ್ನು 48,75,000 ರೈತರ ಖಾತೆಗಳಿಗೆ ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ನಿಧಿ ಭಾರತದಲ್ಲಿರುವ ಭೂಹಿಡುವಳಿ ಹೊಂದಿದ ರೈತರ ಆದಾಯ ಬೆಂಬಲಿಸುವ ಯೋಜನೆಯಾಗಿದ್ದು, ಕೇಂದ್ರ

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್ ➤ ಖಾತೆಗೆ 2000 ರೂ. ಜಮಾ Read More »

ಕರ್ನಾಟಕ

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಚಾಕುವಿನಿಂದ ಇರಿದು ಯುವಕನೋರ್ವನ ಕೊಲೆ‌ ಮಾಡಿರುವ ಬಗ್ಗೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಿಂದ ವರದಿಯಾಗಿದೆ. ಹತ್ಯೆಯಾದವರನ್ನು ಇಸ್ಮಾಯಿಲ್ ಖಾನ್(26) ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಿಂದ ಇವರ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ನಡೆದಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ರಾಗರ್ ನಿಂದ ಇರಿದು ಕೊಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

7ನೇ ನೂತನ ವಿ.ವಿ ಗಳಿಗೆ ಕುಲಪತಿಗಳ ನೇಮಕ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.21. ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ

7ನೇ ನೂತನ ವಿ.ವಿ ಗಳಿಗೆ ಕುಲಪತಿಗಳ ನೇಮಕ Read More »

ಕರ್ನಾಟಕ

➤ ಶಾಸಕ ರಿಜ್ವಾನ್ ಅರ್ಷದ್ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಬೆಂಕಿ ಹಚ್ಚಿದ ಮಹಿಳೆಯರು!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.   ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು, ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದಾರೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಫರೀದಾ ಅಹಮದ್ ಒಡೆತನದ ಗೋದಾಮಿನ ಮೇಲೆ ದಾಳಿ ನಡೆಸಿ ಸಾವಿರಾರು ಪಡಿತರ ಕಿಟ್‌ಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಶಿವಾಜಿನಗರದಲ್ಲಿ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದರು. ಚುನಾವಣಾ ಕಾರಣಕ್ಕಾಗಿ ಮಾಜಿ ಕಾರ್ಪೊರೇಟರ್ ರಂಜಾನ್ ಸಮಯದಲ್ಲಿ ವಿತರಿಸುವ ಪಡಿತರ ಕಿಟ್‌ಗಳನ್ನು ತಡೆಯುವ ಮಾರ್ಗವಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

➤ ಶಾಸಕ ರಿಜ್ವಾನ್ ಅರ್ಷದ್ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಬೆಂಕಿ ಹಚ್ಚಿದ ಮಹಿಳೆಯರು! Read More »

ಕರ್ನಾಟಕ

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.  ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ  ರೆಸ್ಟೋರೆಂಟ್  ಮಾಲೀಕ ಮತ್ತು ಅವರ ಪತ್ನಿಗೆ ರೂ.  3.7 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ.  ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ತಮ್ಮ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ. ವಂಚಕರು ಫೆಬ್ರವರಿ 28 ರಂದು ಬೆಸ್ಕಾಂ ಬಿಲ್ ಪಾವತಿ ಅಪ್ ಡೇಟ್ ಆಗಿಲ್ಲ 

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಎನ್ನಲಾಗಿದೆ.

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

ಕರ್ನಾಟಕ

ಬೆಂಗಳೂರಿನಲ್ಲಿ ತಗ್ಗಿದ ಧೂಮಪಾನ ➤ ಮೊದಲ ಬಾರಿಗೆ ಜಾಗತಿಕ ಆರೋಗ್ಯಕರ ನಗರ ಪ್ರಶಸ್ತಿ ಗರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ನೀಡುವ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿ 2023 ಕ್ಕೆ ಭಾಜನವಾಗಿದೆ. ಧೂಮಪಾನ-ಮುಕ್ತ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತಗ್ಗಿದ ಧೂಮಪಾನ ➤ ಮೊದಲ ಬಾರಿಗೆ ಜಾಗತಿಕ ಆರೋಗ್ಯಕರ ನಗರ ಪ್ರಶಸ್ತಿ ಗರಿ Read More »

ಕರ್ನಾಟಕ

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಜಿಗಣಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಭಾಗ್ಯಶ್ರೀ ಮತ್ತು ಶಂಕರಪ್ಪ ತಳವಾರ ಎಂದು ಗುರುತಿಸಲಾಗಿದೆ. ಭಾಗ್ಯಶ್ರೀ ಮತ್ತು ಸುಪುತ್ರ ಬೆಂಗಳೂರು ಹೊರವಲಯ ಜಿಗಣಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.  

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ವರದರಾಜು ನೀಡಿದ ದೂರಿನಂತೆ 36 ಮಂದಿ ಕಾಂಗ್ರೆಸ್

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು Read More »

ಕರ್ನಾಟಕ
Scroll to Top