Bangalore

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.10. ಹೆಣ್ಣು ಹೊನ್ನು ಮಣ್ಣಿಗಾಗಿ ಜನ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ. ಅದೇ ರೀತಿಯ ಪ್ರಕರಣ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಈತ ತನ್ನ ಗೆಳೆಯರೊಂದಿಗೆ ಪಾರ್ಟಿ ಮಾಡಲು ಬಂದು ಬಾರ್​ಗೆ ಬಂದು ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇಷ್ಟೆಲ್ಲ ಗಲಾಟೆ ಮಾಡಿದ್ದೂ ಪ್ರತಿಷ್ಟಿತ ರಾಜಕಾರಣಿಗೆ ಸೇರಿದ ಬಾರ್​ನಲ್ಲಿ! ಈ ರೌಡಿಶೀಟರ್ ಯುವತಿಯೊಬ್ಬಳನ್ನ ಬಾರ್​ಗೆ ಕರೆ ತಂದು ಆತನ ಸಹಚರರೊಂದಿಗೆ ಅವಾಜ್ ಹಾಕಿ ಲಾಂಗ್ ಬೀಸಿ ಕಿರಿಕ್ ಮಾಡಿದ್ದಾನೆ.  

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!            Read More »

ಕರ್ನಾಟಕ

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮುನೇಕೊಳಲು ನಿವಾಸಿ ಸಂತ್ರಸ್ತನಿಗೆ ಕರೆ ಮಾಡಿರುವ ಅಪರಿಚಿತ ಮಹಿಳೆ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಲು ಆಸಕ್ತಿ ಇದೆಯೇ ಎಂದು ಕೇಳಿದ್ದಾಳೆ. ಆನ್ಲೈನ್ ಡೇಟಿಂಗ್ ಆ್ಯಪ್ನ ಚಂದಾದಾರರಾಗಿದ್ದ ವ್ಯಕ್ತಿ, ಆಕೆಯ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ರಾಯಲ್ ಶೆಲ್ಟರ್ಸ್ ಲೇಔಟ್ನಲ್ಲಿರುವ ಮನೆಗೆ ತೆರಳಿದ್ದಾನೆ.

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ Read More »

ಕರ್ನಾಟಕ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ. ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಕಬ್ಜಾದ ಹಿಂದಿ ಆವೃತ್ತಿಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ನಾವು ಈ ಮೊದಲೇ ವರದಿ ಮಾಡಿದ್ದೇವೆ. ಇದೀಗ ಸುಧಾಕರ್ ರೆಡ್ಡಿ ಮತ್ತು ಬಾಂಬೆ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ Read More »

ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಯ ಮೊದಲ ದಿನವಾದ ನಿನ್ನೆ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳು ನಡೆದವು. 5.33 ಲಕ್ಷ ವಿದ್ಯಾರ್ಥಿಗಳ ಪೈತಿ 5.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ, ಒಟ್ಟು 23,771 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.’ ಮೊದಲ ದಿನವೇ ಇಬ್ಬರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದು ಎರಡು ಅವ್ಯವಹಾರ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್ Read More »

ಕರ್ನಾಟಕ
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!   

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ವಧುವನ್ನು ಭಾರೀ ಟ್ರಾಫಿಕ್‌ ಮಧ್ಯೆ ಬಿಟ್ಟು ವರ ಪರಾರಿಯಾದ ಘಟನೆ ಮಹದೇವಪುರ ಟೆಕ್‌ ಕಾರಿಡಾರ್‌ ಸಮೀಪ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಜಾರ್ಜ್ ಎಂಬಾತ ವಿವಾಹವಾದ ಮರು ದಿನವೇ ಕಾರಿನಲ್ಲಿ ಪತ್ನಿ ಜೊತೆ ಚರ್ಚ್‌ಗೆ ತೆರಳುತ್ತಿದ್ದ. ದಂಪತಿಗಳಿಬ್ಬರು ಟ್ರಾಫಿಕ್‌ ಮಧ್ಯೆ ಇರುವಾಗ ವರ ವಧುವನ್ನು ಟ್ರಾಫಿಕ್ ನಲ್ಲಿ ಬಿಟ್ಟು ಪರಾರಿಯಾಗಿದ್ದ. ಕಾರಿನಲ್ಲಿ ಹೋಗುತ್ತಿದ್ದಂತೆ ವರನ ಮೊಬೈಲ್‌ಗೆ ಅನೈತಿಕ ಸಂಬಂಧ ಹೊಂದಿದ ಯುವತಿಯ ಮೆಸೆಜ್‌ ಬಂದಿದ್ದು, ಆಕೆ ಸಂದೇಶದಲ್ಲಿ ಪೋಟೋವನ್ನು ಕೂಡ

ನವವಧುವನ್ನು ಟ್ರಾಫಿಕ್ ನಲ್ಲೇ ಬಿಟ್ಟು ವರ ಪರಾರಿ..!    Read More »

ಕರ್ನಾಟಕ

ರೈಸ್ ಪುಲ್ಲರ್ ಹಗರಣ ➤ 8 ಮಂದಿ ಬಂಧನ​       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಸಾರ್ವಜನಿಕರಿಗೆ ರೈಸ್ ಪುಲ್ಲರ್ ಲೋಹದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಲೋಹದ ಪಾತ್ರೆಯಲ್ಲಿ ಏರೋಸ್ಪೇಸ್ ಸಂಸ್ಥೆಗಳು ಬಳಕೆ ಮಾಡುವ ತಾಮ್ರದ ಇರಿಡಿಯಮ್ ಲೋಹ ಇದೆ. ಇಂತಹ ಪಾತ್ರೆಗೆ ವಿಶೇಷವಾದ ಶಕ್ತಿ ಇದೆ. ಇದನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದರಿಂದ ಕೋಟ್ಯಾಂತರ ರೂಪಾಯಿ ದುಡ್ಡು ಮಾಡಬಹುದು, ಕಡಿಮೆ ಬೆಲೆ ನಿಮಗೆ ಮಾರಾಟ ಮಾಡುತ್ತೇವೆ ಎಂದು ಒಂದಷ್ಟು ಖದೀಮರ ತಂಡ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುತ್ತಿತ್ತು.

ರೈಸ್ ಪುಲ್ಲರ್ ಹಗರಣ ➤ 8 ಮಂದಿ ಬಂಧನ​        Read More »

ಕರ್ನಾಟಕ

ಕಬ್ಬನ್ ಪಾರ್ಕ್ ನಲ್ಲಿ ಮಾ. 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ  ತಿಳಿಸಿದ್ದಾರೆ‌. ಮಹಿಳೆಯರಲ್ಲಿ ಕ್ರೀಡಾ ಉತ್ಸಾಹ  ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆ  ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಲಿದ್ದಾರೆ.  

ಕಬ್ಬನ್ ಪಾರ್ಕ್ ನಲ್ಲಿ ಮಾ. 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ Read More »

ಕರ್ನಾಟಕ

ಮಾ. 12ರಂದು ಮಂಡ್ಯದಲ್ಲಿ 1.8 ಕಿ.ಮೀ. ರೋಡ್‌ ಶೋ ನಡೆಸಲಿರುವ ಪ್ರಧಾನಿ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಅಲ್ಲದೇ ಪ್ರವಾಸಿ ಮಂದಿರ ವೃತ್ತದಿಂದ ಮೈ ಶುಗರ್ ಫ್ಯಾಕ್ಟರಿ ಸರ್ಕಲ್‌ವರೆಗೆ ರೋಡ್ ಶೋ ಕೂಡಾ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಳಿಕ ಮದ್ದೂರು ತಾಲೂಕು ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೇದಿಕೆಗೆ ಹೋಗುವ ಮುನ್ನ ನಿಗದಿತ ಸ್ಥಳದಲ್ಲಿ ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ.    

ಮಾ. 12ರಂದು ಮಂಡ್ಯದಲ್ಲಿ 1.8 ಕಿ.ಮೀ. ರೋಡ್‌ ಶೋ ನಡೆಸಲಿರುವ ಪ್ರಧಾನಿ        Read More »

ಕರ್ನಾಟಕ

ಹೊಟ್ಟೆ ನೋವೆಂದು ಆಸ್ಪತ್ರೆಯಲ್ಲಿ ದಾಖಲಾದ ಕಂದಮ್ಮ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಹೊಟ್ಟೆ ನೋವು ಅಂತ ಕರೆದುಕೊಂಡು ಬಂದಿದ್ದ ಮಗು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿದ ಪೋಷಕರು, 6 ತಿಂಗಳ ಮಗುವಿಗೆ ಒವರ್ ಡೋಸ್ ಮಾಡಿ ವೈದ್ಯರು ಸಾಯಿಸಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ. ವೇಣುಗೋಪಾಲ್ ಪ್ರಿಯಾಂಕ ಎಂಬವರ ಮಗುವಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಒವಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ಚಿಕಿತ್ಸೆ ವೈದ್ಯರು ನೀಡುತ್ತಿದ್ದರು.

ಹೊಟ್ಟೆ ನೋವೆಂದು ಆಸ್ಪತ್ರೆಯಲ್ಲಿ ದಾಖಲಾದ ಕಂದಮ್ಮ ಮೃತ್ಯು Read More »

ಕರ್ನಾಟಕ
Scroll to Top