Bangalore

ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ➤ 7 ವರ್ಷ ಸೇವೆ ಕಡ್ಡಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಹೊಸ ನಿಯಮಾವಳಿಗಳಿಗೆ ಸಂಬಂಧಪಟ್ಟಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕಾನ್‌ ಸ್ಟೆಬಲ್‌ನಿಂದ ಪೊಲೀಸ್ ಸಬ್‌ ಇನ್‌ ಸ್ಪೆಕ್ಟರ್‌ವರೆಗಿನ (ಪಿಎಸ್‌ಐ) ಹುದ್ದೆಗಳಲ್ಲಿರುವವರ ವರ್ಗಾವಣೆಗೆ ಆಯಾ ಘಟಕಗಳಲ್ಲಿ ಪ್ರಕ್ರಿಯೆ ಶುರುವಾಗಿದೆ.

ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ➤ 7 ವರ್ಷ ಸೇವೆ ಕಡ್ಡಾಯ Read More »

ಕರ್ನಾಟಕ

ತಾ. ಜಿ.ಪಂ ಚುನಾವಣೆ..! ➤ ಏಪ್ರಿಲ್ 1ರೊಳಗೆ ಮೀಸಲು ಪ್ರಕಟ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಚುನಾವಣೆಗೆ ಕುರಿತು ಏಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಹಾದಿ ಸಗಮವಾದಂತಾಗಿದೆ. ಹೈಕೋರ್ಟ್ ಚಾಟಿ ಬೀಸಿದ ನಂತರ ಸರ್ಕಾರ ಕೊನೆಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಕುರಿತು ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಿದೆ.  

ತಾ. ಜಿ.ಪಂ ಚುನಾವಣೆ..! ➤ ಏಪ್ರಿಲ್ 1ರೊಳಗೆ ಮೀಸಲು ಪ್ರಕಟ Read More »

ಕರ್ನಾಟಕ

ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.  

ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ.

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..! Read More »

ಕರ್ನಾಟಕ

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬರೋಬ್ಬರಿ 6 ಕೋಟಿ ರೂ. ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್ ಅವರನ್ನು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ದಾಳಿ..! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ₹6 ಕೋಟಿ ನಗದು ವಶ Read More »

ಕರ್ನಾಟಕ

ಪಿಯುಸಿ ವಿದ್ಯಾರ್ಥಿನಿಗೆ ವಿವಾಹವಾಗುವಂತೆ ಕಿರುಕುಳ ಕೊಟ್ಟ ಅಂಕಲ್ ! ➤ ಕೋಪಗೊಂಡು ಸಾರ್ವಜನಿಕವಾಗಿ ಥಳಿಸಿದ ವಿದ್ಯಾರ್ಥಿನಿ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಪಿಯುಸಿ ವಿದ್ಯಾರ್ಥಿ ನಿಗೆ ಬೆನ್ನುಬಿದ್ದು ವಿವಾಹವಾಗುವಂತೆ ಪೀಡಿಸಿದ್ದಕ್ಕೆ ಬಾಲಕಿ ವ್ಯಕ್ತಿಯೋರ್ವನಿಗೆ ನಡು ರಸ್ತೆಯಲ್ಲಿಯೇ ಸಾರ್ವಜನಿಕರ ಸಮ್ಮುಖದಲ್ಲಿ ಚಪ್ಪಲಿಯಿಂದ ಥಳಿಸಿದ್ದಾಳೆ. ಯಶವಂತಪುರ ಹೋಳಿಗೆ ಮನೆ ಹೋಟೆಲ್‌ನ ಬಳಿ ಈ ಘಟನೆಯ ನಡೆದಿದೆ.ಬೆಳ್ಳಕೆರೆ ನಿವಾಸಿ ರವೀಂದ್ರ(40) ಎಂಬುವರು ಚಪ್ಪಲಿಯಿಂದ ಪೆಟ್ಟು ತಿಂದ ವ್ಯಕ್ತಿ. ಈತನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  

ಪಿಯುಸಿ ವಿದ್ಯಾರ್ಥಿನಿಗೆ ವಿವಾಹವಾಗುವಂತೆ ಕಿರುಕುಳ ಕೊಟ್ಟ ಅಂಕಲ್ ! ➤ ಕೋಪಗೊಂಡು ಸಾರ್ವಜನಿಕವಾಗಿ ಥಳಿಸಿದ ವಿದ್ಯಾರ್ಥಿನಿ ! Read More »

ಕರ್ನಾಟಕ

ಎಲ್ಲ ಸಾರಿಗೆ ವಾಹನಗಳಿಗೆ ಈ ನಿಯಮ ಕಡ್ಡಾಯ ಮಾಡಿ ಸರ್ಕಾರ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾರ್ಚ್. 02. ಕೇಂದ್ರ ಮೋಟಾರು ವಾಹನಗಳ ನಿಯಮದಡಿ ಕರ್ನಾಟಕ ರಾಜ್ಯ ಎಲ್ಲ ಸಾರಿಗೆ ವಾಹನಗಳಿಗೆ ‘ರೆಟ್ರೋ ರೆಫ್ಲೆಕ್ಟಿವ್ ಟ್ಯಾಫ್ ಆಂಡ್ ರಿಯರ್ ಮಾರ್ಕಿಂಗ್ ಪ್ಲೇಟ್‌’ ಅಳವಡಿಕೆ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 104ರ ಅಡಿ ರಾಜ್ಯದ ಎಲ್ಲ ವಿಧದ ಸಾರಿಗೆ ವರ್ಗದ ವಾಹನಗಳಿಗೆ ಅರ್ಹತಾ ಪತ್ರ ಮತ್ತು ಪತ್ರ ನವೀಕರಣ ಸಂದರ್ಭದಲ್ಲಿ ನಿಯಮ ಪಾಲಿಸಬೇಕು.

ಎಲ್ಲ ಸಾರಿಗೆ ವಾಹನಗಳಿಗೆ ಈ ನಿಯಮ ಕಡ್ಡಾಯ ಮಾಡಿ ಸರ್ಕಾರ ಆದೇಶ ! Read More »

ಕರ್ನಾಟಕ

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ನಿಕುಂಜ್ ಬಾಬಿಲ್ ಎಂಬಾತನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.  

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಈ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಪೈಕಿ ಎರಡು ಬಾರಿ ಆಗಮಿಸುವುದು ನಿಶ್ಚಿತವಾಗಿದೆ. ಮೂರನೇ ಬಾರಿ ಆಗಮಿಸುವ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾ.12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ನಿರೀಕ್ಷೆಯಿದೆ. ಈ ಮೊದಲು 11ರಂದು ಮಂಡ್ಯಕ್ಕೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಒಂದು ದಿನ

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..! Read More »

ಕರ್ನಾಟಕ

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಇತ್ತೀಚಿಗೆ ನಿವೃತ್ತ ಮಹಿಳಾ ಪೊಲೀಸ್‌ ಇನ್ಸ್ ಪೆಕ್ಟರ್‌ವೊಬ್ಬರಿಂದ ಚಿನ್ನದ ಸರ ದೋಚಿದ್ದ ಚಾಲಾಕಿ ಖದೀಮನೊಬ್ಬ ಚಂದ್ರಾಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉಲ್ಲಾಳ ನಿವಾಸಿ ದರ್ಶನ್‌ ಬಂಧಿತನಾಗಿದ್ದು, ಆರೋಪಿಯಿಂದ 3 ಲಕ್ಷ ರು ಮೌಲ್ಯದ 76.4 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮೂಡಲಪಾಳ್ಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್‌ ಕಾಲೋನಿ ನಿವಾಸಿ ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೀತಾರೆಡ್ಡಿ ಅವರು ಮನೆ ಮುಂದೆ ಕಸ ಗುಡಿಸುವಾಗ ಸರ ಕಳವು ಮಾಡಿ ಕಿಡಿಗೇಡಿ ಪರಾರಿಯಾಗಿದ್ದ.

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top