Bangalore

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11.  2012-13 ಹಾಗೂ 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿದಂತೆ ಎಂಟು ಮಂದಿ ಶಿಕ್ಷಕರನ್ನು ಅಪರಾಧ ತನಿಖಾ ದಳ (ಸಿಐಡಿ) ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಎರಡೂ ಪ್ರಕರಣ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಕಂಪ್ಯೂಟರ್‌ ಪ್ರೋಗ್ರಾಮರ್‌ ಹಾಗೂ 61 ಸಹ ಶಿಕ್ಷಕರು ಸೇರಿದಂತೆ 68 ಆರೋಪಿಗಳ […]

 ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ Read More »

ಕರ್ನಾಟಕ

ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ರೈಲ್ವೆ ಇಲಾಖೆ ವಂದೇ ಮೆಟ್ರೋ ಓಡಿಸಲು ಸಜ್ಜಾಗಿದೆ. 2023ರಲ್ಲೇ ವಂದೇ ಮೆಟ್ರೋ ಓಡಿಸಲು ತಯಾರಿ ನಡೆದಿದೆ. ಇದು ಜನರಿಗೆ ಶುಭ  ಸುದ್ದಿಯಾಗಿದ್ದು, ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ ಎಂದು ವರದಿಯಾಗಿದೆ. ವಂದೇ ಮೆಟ್ರೋ ಬೆಂಗಳೂರಿನ 100 ಕಿ.ಮೀ. ವ್ಯಾಪ್ತಿಯಲ್ಲಿ ಓಡಲಿದೆ. ಎರಡು ವಿಭಿನ್ನ ನಗರಗಳನ್ನು ಸಂಪರ್ಕಿಸುವ ಹೊಸ ಯೋಜನೆಯಾಗಿದೆ. ಪ್ರಧಾನಿ ಮುತುವರ್ಜಿಯಿಂದ ವಂದೇ ಮೆಟ್ರೋ ಆರಂಭವಾಗಲಿದೆ. ಬೆಂಗಳೂರು-ತುಮಕೂರು, ಬೆಂಗಳೂರು-ಹಿಂದೂಪುರ ನಡುವೆ ಸಂಚಾರ ನಡೆಸಲಿದೆ. ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್

ವಂದೇ ಭಾರತ್​ ಮಾದರಿಯಲ್ಲಿ ಓಡುತ್ತೆ ವಂದೇ ಮೆಟ್ರೋ… Read More »

ಕರ್ನಾಟಕ

 ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು ➤ಸಚಿವ ಬಿಸಿ.ನಾಗೇಶ್ 

(ನ್ಯೂಸ್ ಕಡಬ) newskadaba.com   ಬೆಂಗಳೂರು, ಫೆ.10. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದರು. ಈ  ಕುರಿತು ಮಾಹಿತಿ ನೀಡಿರುವ ಸಚಿವರು, ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು

 ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು ➤ಸಚಿವ ಬಿಸಿ.ನಾಗೇಶ್  Read More »

ಕರ್ನಾಟಕ

ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಶಾಲೆ!

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.09. ಶಾಲೆಯೊಂದು ಯುಕೆಜಿ ವಿದ್ಯಾರ್ಥಿನಿಯನ್ನು ಎರಡು ರೈಮ್ಸ್ ಹೇಳಲು ವಿಫಲವಾದಳೆಂದು ಸೆಮಿಸ್ಟರ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದು,ಇದರಿಂದ ಆಕ್ರೋಶಗೊಂಡ ಹೆತ್ತವರು  ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯ ತಂದೆ ಮನೋಜ್ ಬಾದಲ್, “ಶಾಲೆಯ ಆ್ಯಪ್ ನಲ್ಲಿ ನಮ್ಮ ಪುತ್ರಿಯ  ಅಂಕಪಟ್ಟಿ ನೋಡಿ ಆಘಾತಗೊಂಡೆವು.ಆಕೆ 160 ಅಂಕಗಳ ಪೈಕಿ 100 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಳು.ಆದರೆ, 40 ಅಂಕದ ಪೈಕಿ ಕನಿಷ್ಟ 14 ಅಂಕ ಗಳಿಸಬೇಕಿದ್ದ ರೈಮ್ಸ್ ನಲ್ಲಿ ಕೇವಲ

ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಶಾಲೆ! Read More »

ಕರ್ನಾಟಕ

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ವಿಶ್ವವಿದ್ಯಾಲಯ ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಿಗದಿ ಮಾಡಿದ್ದ ಪಿ.ಎಚ್‌.ಡಿ ಕಡ್ಡಾಯ ನಿಯಮವನ್ನು ತೆಗೆದುಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ ಮುಂದಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ಆಯಾ ರಾಜ್ಯದ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿದ್ದರೆ ಸಾಕಿತ್ತು. ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌.ಡಿ ಕಡ್ಡಾಯಗೊಳಿಸಿತ್ತು ಆದರೆ ಇನ್ಮೇಲೆ ಕಡ್ಡಾಯ ನಿಯಮವನ್ನು ತೆಗೆದುಹಾಕಲು

ಇನ್ಮುಂದೆ ಪ್ರಾಧ್ಯಾಪಕ ಹುದ್ದೆಗೆ ಪಿಎಚ್‌.ಡಿ ಕಡ್ಡಾಯ ಇಲ್ಲ..! Read More »

ಕರ್ನಾಟಕ

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ (60) ಎಂದು ಗುರುತಿಸಲಾಗಿದೆ.  ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ. ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.      

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ಯೋಜನೆಗಳಿಂದ ಹೊಸ ಗುರಿ !     ➤  ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.06. ಹೊಸ ಯೋಜನೆಗಳಿಂದ ಹೊಸ ಹೆಜ್ಜೆ , ಹೊಸ ಗುರಿಯೊಂದಿಗೆ ಮುಂದೆ ಕೇಂದ್ರ ಸರ್ಕಾರ ಮುಂದೆ ಸಾಗುತ್ತಿದ್ದು, ದೇಶವು ಗುರಿ ಮುಟ್ಟಲು ಕರ್ನಾಟಕವು ತನ್ನ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಬದುಕಿನ ಹಲವು ಮುಖಗಳು ಬದಲಾಗಿವೆ. ಇದನ್ನು ಗಮನಿಸಿದ ಪ್ರಧಾನಿ ಮೋದಿ ಹೊಸ ಗುರಿಗಳನ್ನು ಕೊಟ್ಟಿದ್ದಾರೆ ಎಂದು ವರದಿ ತಿಳಿಸಿದೆ.  

ಹೊಸ ಯೋಜನೆಗಳಿಂದ ಹೊಸ ಗುರಿ !     ➤  ಸಿಎಂ ಬೊಮ್ಮಾಯಿ..! Read More »

ಕರಾವಳಿ, ಕರ್ನಾಟಕ

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 06. ‘ನಾನು ಕೊಲ್ಕತ್ತಾಗೆ ತುರ್ತಾಗಿ ಹೋಗಬೇಕು. ಇಲ್ಲವಾದರೆ, ಬಾಂಬ್‌ ಹಾಕಿ ಏರ್‌ಪೋರ್ಚ್‌ ಸ್ಫೋಟಿಸುತ್ತೇನೆ’ ಎಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ರಂಪಾಟ ಮಾಡಿದ ಮಹಿಳೆಯನ್ನು ಕೆಐಎ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕೇರಳ ರಾಜ್ಯದ ಕಾಜಿಕೋಡ್‌ ಮೂಲದ ಮಾನಸಿ ಸತೇಬೈನು(31) ಜೈಲು ಪಾಲಾದವರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರ ತಾ ಪಡೆಯ (ಸಿಐಎಸ್‌ಎಫ್‌) ಸಿಬ್ಬಂದಿ ಸಂದೀಪ್‌ ಸಿಂಗ್‌ ಅವರು

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..! Read More »

ಕರ್ನಾಟಕ

ನಿಲ್ಲದ ಜಿಎಸ್​ಟಿ ಮೋಸ; ನಕಲಿ ಇನ್ ​ವಾಯ್ಸ್​ ಸೃಷ್ಟಿ ➤ 6 ವರ್ಷದಲ್ಲಿ 68,000 ಕೋಟಿ ರೂ. ಲೂಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. 2023ರ ಜನವರಿಯಲ್ಲಿ 2ನೇ ಬಾರಿಗೆ ಅತಿಹೆಚ್ಚು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಸಂಗ್ರಹವಾಗಿರುವ ದಾಖಲೆ ಬೆನ್ನಲ್ಲೇ, ದೇಶಾದ್ಯಂತ ಬೋಗಸ್ ಇನ್​ ವಾಯ್ಸ್ ಗಳನ್ನು ಸೃಷ್ಟಿಸಿ ಸಾವಿರಾರು ಕೋಟಿ ರೂ. ವಂಚಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ. ‘ಅಡ್ಡದಾರಿ’ಯಲ್ಲಿ ತೆರಿಗೆ ಸೋರಿಕೆ ತಡೆಯುವ ಉದ್ದೇಶದಿಂದ ಎಷ್ಟೇ ಬಿಗಿ ನಿಯಮಗಳನ್ನು ತಂದರೂ ತೆರಿಗೆ ವಂಚಕರ ಹೆಡೆಮುರಿ ಕಟ್ಟಲು ಸಾಧ್ಯವಾಗುತ್ತಿಲ್ಲ. 2022ರ ಏಪ್ರಿಲ್​ನಲ್ಲಿ 1.68 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನಿಲ್ಲದ ಜಿಎಸ್​ಟಿ ಮೋಸ; ನಕಲಿ ಇನ್ ​ವಾಯ್ಸ್​ ಸೃಷ್ಟಿ ➤ 6 ವರ್ಷದಲ್ಲಿ 68,000 ಕೋಟಿ ರೂ. ಲೂಟಿ Read More »

ಕರ್ನಾಟಕ
Scroll to Top