Bangalore

Theft, crime, Robbery

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..!

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಆಟೋ ಪ್ರಯಾಣಿಕ ಬಳಿ 10 ಸಾವಿರ ರೂ. ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ್ದಾರೆ. ಡಿಯೋದಲ್ಲಿ ಆಟೋ ಹಿಂಬಾಲಿಸಿ ದುಷ್ಕರ್ಮಿಗಳು ಬಂದಿದ್ದು, ಮಚ್ಚು ತೋರಿಸಿ 10 ಸಾವಿರ ರೂ. ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಅದೇ ರಸ್ತೆಯಲ್ಲಿ ಕಾರು ಬಂದಿದ್ದರಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ […]

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣ ಹಂತದ ಪಿಲ್ಲರ್‌ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಎಂಆರ್‌ಸಿಎಲ್‌ಗೆ ನೀಡುವುದಾಗಿ ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಐಐಎಸ್‌ಸಿ ತಜ್ಞ ಚಂದ್ರಕಿಶನ್‌, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ದುರಂತದ ಹತ್ತು ದಿನಗಳ ಮೊದಲಿನ ದಾಖಲೆಗಳನ್ನು ಪಡೆದಿದ್ದೇವೆ. ಜತೆಗೆ ಪಿಲ್ಲರ್‌ಗೆ ಬಳಸಲಾದ ಕಬ್ಬಿಣ, ಸ್ಟೀಲನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಶೇ.80ರಷ್ಟು ತಾಂತ್ರಿಕ ತನಿಖೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಜತೆಗೆ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..! Read More »

ಕರ್ನಾಟಕ

ಗರ್ಭಿಣಿ ಪತ್ನಿಯನ್ನು ಕೊಂದು ಪರಾರಿಯಾದ ಪಾಪಿ ಗಂಡ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಶೀಲ ಶಂಕಿಸಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಮನೆಯಿಂದಲೇ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುದ್ದುಗುಂಟೆಪಾಳ್ಯ ಠಾಣೆಯಲ್ಲಿ ದಾಖಲಾಗಿದೆ.  ತಾವರೆಕೆರೆಯ ಸುಭಾಷ್ ನಗರದ ನಿವಾಸಿ 22 ವರ್ಷದ ನಾಜ್ ಕೊಲೆಯಾದ ಮಹಿಳೆ. ನಾಜ್ 6 ತಿಂಗಳ ಹಿಂದಷ್ಟೇ ಖಾಸಗಿ ಕಂಪನಿ ಉದ್ಯೋಗಿ ನಾಸೀರ್ ಹುಸೇನ್ ಎಂಬುವವನನ್ನ ಪ್ರೀತಿಸಿ, ಪೋಷಕರ ಅನುಮತಿ ಪಡೆದು ಮದುವೆಯಾಗಿದ್ದಳು. ನಾಸೀರ್ ಹುಸೇನ್ ಗೆ ತಂದೆ ತಾಯಿ ಇರದ ಕಾರಣ ಮದುವೆಯ ಬಳಿಕ ತಾವರೆಕೆರೆಯ ಸುಭಾಷ್ ನಗರದ ಫ್ಲಾಟ್ ನಲ್ಲಿ

ಗರ್ಭಿಣಿ ಪತ್ನಿಯನ್ನು ಕೊಂದು ಪರಾರಿಯಾದ ಪಾಪಿ ಗಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ ➤ ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ. ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ. ಬೆಂಗಳೂರಿಗೆ ಸಮೀಪದಲ್ಲಿರುವ ಕನಕಪುರ ಪಟ್ಟಣದ ಸಮೀಪದ ಕುರುಬಳ್ಳಿದೊಡ್ಡಿ ಗ್ರಾಮದ ನಿವಾಸಿ ಮೂರ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೂರ್ತಿ ಅವರು ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ

ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ ➤ ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಬಲಿ ಸಂಭವಿಸಿದ್ದು ಬಾಣಸವಾಡಿಯ ಹೊರವರ್ತುಲ ಮುಖ್ಯರಸ್ತೆಯ ಮದರ್ ವುಡ್ ಆಸ್ಪತ್ರೆಯ ಬಳಿ  ಮೆಟ್ರೋ ಬ್ಯಾರಿಕೇಡ್ ಸ್ವಚ್ಚತಾ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕರೊಬ್ಬರು ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಿಹಾರದ ಕಾಟೇಯಾದ ಗುಡ್ಡು ಮಾಂಜಿ(28)ಮೃತಪಟ್ಟ ಕೂಲಿ ಕಾರ್ಮಿಕನಾಗಿದ್ದಾರೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ತಿಳಿಸಿದ್ದಾರೆ. ಮೆಟ್ರೋ ಬ್ಯಾರಿಕೇಡ್ ರಿಪೇರಿ ಹಾಗೂ ಸ್ವಚ್ಚ ಮಾಡಲು ಬ್ಯಾರಿಕೇಡ್ ಅಳವಡಿಸಿಕೊಂಡು ಗುಡ್ಡು ಮಾಂಜಿ ಕೆಲಸ

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಬೇಕರಿ ಮಾಲೀಕರೊಬ್ಬರಿಗೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹಲ್ಲೆಗೈದಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಮಂಜುನಾಥ್ ಶೆಟ್ಟಿ ಹಲ್ಲೆಗೊಳಗಾದ ಬೇಕರಿ ಮಾಲೀಕರು. ಇವರು ಜೆಪಿ ನಗರದಲ್ಲಿ ಬೇಕರಿ ನಡೆಸುತ್ತಿದ್ದಾರೆ. ಬೇಕರಿ ಹತ್ತಿರ ಬಂದ ನಾಲ್ಕೈದು ಪುಂಡರು ಅಂಗಡಿಯೊಳಗೆ ನುಗ್ಗಿದ್ದು, ಸಿಗರೇಟ್ ಬಂಡಲಿಗೆ ಕೈ ಹಾಕಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ರಾಡ್ ಗಳಿಂದ ಹಲ್ಲೆ ನಡೆಸಿರುವುದಾಗಿ ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನನ್ನನ್ನು ರಸ್ತೆಗೆ ಎಳೆದು ತಂದು ಕಾಲಿನಿಂದ ತುಳಿದಿದ್ದಾರೆ. ರಸ್ತೆಯಲ್ಲಿದ್ದ

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು ? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ. 1781 ಪ್ರಕರಣಗಳನ್ನು ಜಾಗೃತ ದಳ ದಾಖಲಿಸಿಕೊಂಡು ಅದರಲ್ಲಿ 1,721 ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ

ವಿದ್ಯುತ್ ಕಳ್ಳತನ ಮಾಡಿದವರಿಗೆ ಬಿಗ್ ಶಾಕ್ ➤ 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ Read More »

ಕರ್ನಾಟಕ

ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ ‘ಗೃಹಲಕ್ಷ್ಮಿ’ ಯೋಜನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ

ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ ‘ಗೃಹಲಕ್ಷ್ಮಿ’ ಯೋಜನೆ Read More »

ಕರ್ನಾಟಕ

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ಭಾರತದಲ್ಲಿ ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹಾಗೂ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ (ಐವಿಆರ್’ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ. ಈ ಕುರಿತು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಅಂಡ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನ ನಿರ್ದೇಶಕ ಡಾ.ಬಿ.ಆರ್.ಗುಲಾಟಿ ಮಾತನಾಡಿ, ಎಲ್‌ಎಸ್‌ಡಿಗೆ ಕಾರಣವಾಗುವ ವೈರಸ್ ಅನ್ನು ಬಳಸುವ ಹೋಮೋಲೋಗಸ್ ಲಸಿಕೆ ವೈರಸ್ ವಿರುದ್ಧ 100 ಪ್ರತಿಶತದಷ್ಟು ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ Read More »

ಕರ್ನಾಟಕ
Scroll to Top