bangaluru

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದು, ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.  

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ISIS ಲಿಂಕ್​ ಮಾಹಿತಿ ಮೇಲೆ ಶಂಕಿತನ ಭಯೋತ್ಪಾದಕ ಬಂಧನವಾಗಿದ್ದು, ಬೆಳಗಿನ ಜಾವ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ISD, NIA ಅಧಿಕಾರಿಗಳು ಥಣಿಸಂದ್ರದಲ್ಲಿ ಬಂಧಿಸಿದ್ದಾರೆ.  ಇಂದು ಬೆಳಗ್ಗೆ ಬಂಧಿಸಿ ಆರೀಫ್ ವಿಚಾರಣೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ. ISIS ಸಂಪರ್ಕ ಹೊಂದಿರುವ ಮಾಹಿತಿ ಮೇಲೆ ಅರೆಸ್ಟ್ ಮಾಡಲಾಗಿದೆ. ಅಲ್​-ಖೈದ್​​ ಜತೆಯೂ ಸಂಪರ್ಕ ಹೊಂದಿದ್ದ ಮಾಹಿತಿಯಿದೆ. ಆರೀಫ್ ವರ್ಕ್​ ಫ್ರಂ ಹೋಂನಲ್ಲಿ ಕೆಲಸ ಮಾಡುತ್ತಿದ್ದನು.  NIA ಅಧಿಕಾರಿಗಳು ಆರಿಫ್ ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.  

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ  ಬಂಧನ Read More »

ಕರ್ನಾಟಕ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಉತ್ತಮ ವೇತನ ನೀಡುವುದಾಗಿ ಮನವೊಲಿಸಿದ್ದ ಬಮನ ಪಹಡಿಯಾ ಮತ್ತು ಮೈಸ ಪಹಡಿಯಾ ಎಂಬ ಇಬ್ಬರ ವ್ಯಕ್ತಿಗಳು ತಮ್ಮ ಜೊತೆಗೆ ಉತ್ತರ ಭಾರತದಿಂದ ರೈಲಿನಲ್ಲಿ 14 ಮತ್ತು 15 ವರ್ಷದೊಳಗಿನ 11 ಅಪ್ರಾಪ್ತೆಯರು ಮತ್ತು 17 ವರ್ಷದ ಅಪ್ರಾಪ್ತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಹೌರಾ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವರದಿಯಾಗಿದೆ. ಈ ಬಾರಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿದೆ. ಕೊನೆ  ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಸೇರ್ಪಡೆಯಾಗಿದೆ.  14ನೇ ಬಾರಿ ಕರ್ನಾಟಕ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ Read More »

ಕರ್ನಾಟಕ

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕಳವು ಮಾಡಿದ ಬೈಕ್ ಗಳಲ್ಲಿ ಸಂಚರಿಸುತ್ತಾ ಒಂಟಿಯಾಗಿ ಓಡಾಡುವವರ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ಮೂವರು ಖದೀಮರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಯಲಹಂಕ ಶ್ರೀನಿವಾಸಪುರದ ಮುಬಾರಕ್ ಅಲಿಯಾಸ್ ಡೂಮ್(20), ಅಗ್ರಹಾರ ಲೇಔಟ್ ನ ಸುನೀಲ್ ಅಲಿಯಾಸ್ ಚಿತ್ತು(20) ಹಾಗೂ ಯಲಹಂಕದ ಇಸ್ಮಾಯಿಲ್ ಅಲಿಯಾಸ್ ಜಿಶಾನ್ (19) ಎಂದು ಗುರುತಿಸಲಾಗಿದೆ.

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.   ಎರಡ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಕುಖ್ಯಾತ ರೌಡಿಶೀಡರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮುನೇಲ್ ಎಂದು ಗುರುತಿಸಲಾಗಿದೆ.  ಈತನ ಮೇಲೆ ಕೊಲೆಯತ್ನ, ರಾಬರಿ, ಜೀವ ಬೆದರಿಕೆ ಮುಂತಾದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಹೊಸ ಮಾದರಿ ಪ್ರಶ್ನೆಪತ್ರಿಕೆ..! ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಎಲ್ಲಾ ವಿಷಯಗಳಲ್ಲೂ 1 ಅಂಕದ ಪ್ರಶ್ನೆಗಳನ್ನು 20ಕ್ಕೆ ಹೆಚ್ಚಿಸಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಉಳಿದಂತೆ 2, 3, 4, 5 ಮತ್ತು 6 ಅಂಕಗಳ ಪ್ರಶ್ನೆಗಳ ಸಂಖ್ಯೆಯನ್ನು ವಿಷಯವಾರು ಕೊಂಚ ಹೆಚ್ಚು ಕಡಿಮೆ

ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಹೊಸ ಮಾದರಿ ಪ್ರಶ್ನೆಪತ್ರಿಕೆ..! ➤ ರಾಜ್ಯ ಸರ್ಕಾರ Read More »

ಕರ್ನಾಟಕ

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಪೇದೆಯನ್ನು ಹೆಗಡೆ ನಗರದ ನಿವಾಸಿ ನವೀನ್‌ ಕುಮಾರ್‌ (25) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರ ಮನೆ ಮುಂದೆ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ನವೀನ್‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು ಎನ್ನಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಕಾನ್‌ಸ್ಟೇಬಲ್‌

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ತಾಯಿ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಎಫ್‌ಐಆರ್‌ನಲ್ಲಿ ನಾಗಾರ್ಜುನ ಕಂಪನಿ ಸೇರಿ ಒಟ್ಟು 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆಗೆ ಹಾಜರಾಗುವಂತೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ಮತ್ತು ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ)ಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ನಾಗಾರ್ಜುನ ಕಂಪನಿ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top