banglore

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಶೇಖ್ ನಸ್ರೂ(35) ಬಂಧಿತ ಆರೋಪಿ. ಮದ್ಯದ ನಶೆಯಲ್ಲಿ ಕೃತ್ಯ ನಡೆಸಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಸ್ರೂ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ […]

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ Read More »

ಕರ್ನಾಟಕ

ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕರ್ನಾಟಕದ ನಿವಾಸಿಗಳು, ವಿಶೇಷವಾಗಿ ಟೈಯರ್ 2 ಮತ್ತು 3 ನಗರಗಳ ನಿವಾಸಿಗಳು ವಿದೇಶಗಳಿಗೆ ಹೆಚ್ಚು ತೆರಳಲು ಬಯಸುತ್ತಿರುವುದರಿಂದ ಕಳೆದ ವರ್ಷ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಹೆಚ್ಚೆಚ್ಚು ಕಾರ್ಯನಿರತವಾಗಿದೆ. 2024 ರಲ್ಲಿ 8,83,755 ಪಾಸ್‌ಪೋರ್ಟ್‌ಗಳನ್ನು ನೀಡುವ ಮೂಲಕ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2023 ರಲ್ಲಿ 34,000 ಪಾಸ್‌ಪೋರ್ಟ್‌ಗಳ ಮೂಲಕ ನಮ್ಮ ಹಿಂದಿನ ಗರಿಷ್ಠ ದಾಖಲೆಯನ್ನು ಮೀರಿಸಿತ್ತು. ಕರ್ನಾಟಕದ ಟೈಯರ್ 2 ಮತ್ತು 3 ನಗರಗಳಿಂದ ಸ್ವೀಕರಿಸಿದ ಅರ್ಜಿಗಳ ಹೆಚ್ಚಳವು ಈ ಬೆಳವಣಿಗೆಗೆ

ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆ Read More »

ಕರ್ನಾಟಕ

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರಾಜಧಾನಿಯ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್‌ ಸ್ಫೋಟದಿಂದ ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಎದುರು ಮನೆಯವರಿಗೂ ಗಾಯವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ40 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 43 ರೂ. ಏರಿಕೆ ಆಗಿದೆ. ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,340 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,007 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22

ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ ಇದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,286 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,948 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌..!

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 25 ರೂ. ಮತ್ತು 27ರೂ ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌

ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌..! Read More »

ಕರ್ನಾಟಕ

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಅನರ್ಹ ಬಿಪಿಎಲ್

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ Read More »

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ

(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಈಶ್ವರ ಖಂಡ್ರೆ ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ತರಾಟೆಗೆ ತೆಗೆದುಕೊಂಡಿದೆ. ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ಅರಣ್ಯ ಸಚಿವರ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಕಾಂಗ್ರೆಸ್ ನಾಯಕರಿಗೆ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ Read More »

ಕರ್ನಾಟಕ
Scroll to Top