banglore

ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅ.30 ಕ್ಕೆ ಕಾಯ್ದಿರಿಸಿ ತೀರ್ಪು ನೀಡಿದ್ದಾರೆ. ದರ್ಶನ್ ಪರ ವಕೀಲರು, ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. […]

ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ Read More »

ಕರ್ನಾಟಕ

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು. ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ  ಅವರು ಪ್ರತಿಕ್ರಿಯೆ ನೀಡಿದರು.

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ Read More »

ಕರ್ನಾಟಕ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ Read More »

ಕರ್ನಾಟಕ

ಅಡುಗೆ ಎಣ್ಣೆಯ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ದೀಪಾವಳಿ ಹಬ್ಬ ಬರುತ್ತಿದ್ದಂತೆಯೇ ಅಡುಗೆ ಎಣ್ಣೆಯ ಬೆಲೆ ಒಂದು ಲೀಟರ್‌ಗೆ  ₹1ರಿಂದ  ₹5 ರವರೆಗೆ ಹೆಚ್ಚಾಗಿದೆ. ಈಗಾಗಲೇ ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿರುವ ನಡುವೆಯೇ ಪುನಃ ಅಡುಗೆ ಎಣ್ಣೆ ದರ ಹೆಚ್ಚಾಗಿದ್ದು ಬಡ, ಮಧ್ಯಮ ವರ್ಗದ ಗ್ರಾಹಕರನ್ನು ಕಂಗೆಡಿಸಿದೆ. ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆಯ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಳ ಮಾಡಿದ್ದರಿಂದ ಏಕಾಏಕಿ ಅಡುಗೆ ಎಣ್ಣೆ ದರ ₹20ರಿಂದ ₹25ರವರೆಗೆ ಹೆಚ್ಚಳವಾಗಿತ್ತು. ಇದೀಗ ಪುನಃ ಅಡುಗೆ

ಅಡುಗೆ ಎಣ್ಣೆಯ ಬೆಲೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಇಂದು ರಾಜ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಹವಮಾನ ವರದಿ Read More »

ಕರ್ನಾಟಕ

ಸರ್ಕಾರದಿಂದ ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಒತ್ತು

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಸರ್ಕಾರವು ಗಣಿಗಾರಿಕೆ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವ ಉಪಕ್ರಮದ ಭಾಗವಾಗಿ ಕೈಬಿಟ್ಟ ಗಣಿಗಾರಿಕೆ ಪ್ರದೇಶಗಳನ್ನು ಪ್ರವಾಸಿ ಆಕರ್ಷಣೀಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಮುಂದಾಗಿವೆ. ದಕ್ಷಿಣ ಆಫ್ರಿಕಾ ವಿಧಾನದಿಂದ ಸ್ಫೂರ್ತಿ ಪಡೆದ ಪ್ರವಾಸೋದ್ಯಮ ಇಲಾಖೆಯು ಹೊಸದಾಗಿ ಅನುಮೋದಿಸಲಾದ 2024-29 ಪ್ರವಾಸೋದ್ಯಮ ನೀತಿಯಲ್ಲಿ 25 ವಿಷಯಗಳಲ್ಲಿ ಸೇರಿಸಿದೆ. ಈ ನೀತಿಯು ಮುಂದಿನ ಐದು ವರ್ಷಗಳಲ್ಲಿ 1,300 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಗುರಿ ಹೊಂದಿದೆ. ಇದನ್ನು ಪ್ರೋತ್ಸಾಹಿಸಲು ವಿವಿಧ ವಲಯಗಳಲ್ಲಿ 50 ಲಕ್ಷ ರೂಪಾಯಿಗಳಿಂದ 10

ಸರ್ಕಾರದಿಂದ ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಒತ್ತು Read More »

ಕರ್ನಾಟಕ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಮೂಡಾದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ‘ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಸುತ್ತೋಲೆ ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಲು ನಿರಾಕರಿಸಿರುವ ಹೈಕೋರ್ಟ್, ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ. ಈ ಸಂಬಂಧ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್,

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ಶನಿವಾರ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ‘ಕಂಬಳ’ ಆಯೋಜಿಸಲು ಯೋಜಿಸಿಲ್ಲ ಮತ್ತು ಅನುಮತಿ ಕೋರಿ ಅರ್ಜಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿಯು ಕಳೆದ ವರ್ಷ ಕಂಬಳವನ್ನು ಕಾನೂನು ಪ್ರಕಾರ ನಡೆಸಿದೆ. ಕಂಬಳವು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆಯೇ ಎಂಬ ಪೆಟಾ ಅರ್ಜಿಗೆ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ಅವರು ನ್ಯಾಯಾಲಯಕ್ಕೆ ಕಾಲಾವಕಾಶ ಕೋರಿದರು ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ Read More »

ಕರಾವಳಿ

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ನಾಳೆ ಶುಕ್ರವಾರ ಪ್ರಾರಂಭಿಸಲು ಸಿದ್ಧವಾಗಿದೆ, ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದು, ಜನವರಿಯಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎನ್‌ಸಿಡಿಗಳ ಸಂಭವವನ್ನು ಪರಿಹರಿಸುವುದು ಯೋಜನೆಯ ಪ್ರಾಥಮಿಕ

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top