banglore

crime, arrest, suspected

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ,ಹೈದ್ರಾಬಾದ್ – ಇಬ್ಬರು, […]

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಕಳೆದ ತಿಂಗಳು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದ ಮೂವರು ವಿದೇಶಿಯರು ಸೇರಿದಂತೆ 67 ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ. ನಗರದಲ್ಲಿ ಡ್ರಗ್ಸ್ ದಂಧೆ, ಮಾದಕ ದ್ರವ್ಯ ಸಾಗಣೆ ಅಥವಾ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲು ನಗರದ ಪ್ರತಿಯೊಂದು ಭಾಗದಲ್ಲೂ ದಾಳಿ ನಡೆಸಲಾಗುವುದು

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ. ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ: ಡಿಕೆಶಿ

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ. 12 ವರ್ಷ ಎನ್‌ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಮದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದರು.

ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ: ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ

(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರ್ಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ ಬೇಡಿಕೆಗಳ ಬಗ್ಗೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ”

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮಾನ್ಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ,

ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ” Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.comಬೆಂಗಳೂರು, ಅ. 05. : ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೊಮೆಟೊ ದರ ದುಬಾರಿ

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.05):  ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಇದೀಗ ಟೊಮೆಟೊ ದರ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಕಳೆದ ಒಂದು ವಾರದ ಹಿಂದೆ ಟೊಮೆಟೊ ಕೆಜಿಗೆ 40 ರೂ. ಇದ್ದ ದರ ಇದೀಗ ಎರಡು ಪಟ್ಟು ಏರಿಕೆ ಕಂಡಿದೆ. ಅ.4 ರಿಂದ ಟೊಮೆಟೊವು ಕೆಜಿಗೆ 80 ರೂ.ಯಂತೆ ಮಾರಾಟವಾಗುತ್ತಿದೆ. ಅಕಾಲಿಕ ಮಳೆಯಿಂದ ಟೊಮೆಟೊ ಇಳುವರಿ ಕಡಿಮೆಯಾಗಿದೆ. ಇದೇ ವೇಳೆಯಲ್ಲಿ ನವರಾತ್ರಿ ಹಬ್ಬವೂ ಆರಂಭಗೊಂಡಿದ್ದು, ಟೊಮೆಟೊ ಬೇಡಿಕೆ ಹೆಚ್ಚಾಗಿದೆ. ಟೊಮೆಟೊ ಪೂರೈಕೆ ಕಡಿಮೆ ಇದ್ದು, ಬೇಡಿಕೆ

ಟೊಮೆಟೊ ದರ ದುಬಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top