banglore

ಕಾಲೇಜ್ ಗೆ ಬಾಂಬ್ ಬೆದರಿಕೆ; ಬೆಂಗಳೂರಿಗೆ ಎಚ್ಚರಿಕೆ ಕೊಟ್ಟ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.04): ಬೆಂಗಳೂರಿನಲ್ಲಿರುವ ಖಾಸಗಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ಖಾಸಗಿ ಕಾಲೇಜುಗಳಿಗೆ ಈ ಬಾಂಬ್‌ ಬೆದರಿಗೆ ಸಂದೇಶ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇಮೇಲ್ ನೋಡಿದ ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹನುಮಂತನಗರ ಪೊಲೀಸರು ದೌಡಾಯಿಸಿದ್ದು, ಕಾಲೇಜು ಆವರಣದಲ್ಲಿ ಸದ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕಾಲೇಜ್ ಗೆ ಬಾಂಬ್ ಬೆದರಿಕೆ; ಬೆಂಗಳೂರಿಗೆ ಎಚ್ಚರಿಕೆ ಕೊಟ್ಟ ದುಷ್ಕರ್ಮಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04):   ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಗೆ ಲಗ್ಗೆ ಇಡಲಿದೆ ಅಧಿಕೃತ ಆ್ಯಪಲ್ ಸ್ಟೋರ್; ಕಂಪೆನಿಯಿಂದ ಘೋಷಣೆ

(ನ್ಯೂಸ್ ಕಡಬ)newskadaba.com,ಕ್ಯಾಲಿಫೋರ್ನಿಯಾ (ಅ.04):  ಭಾರತದಲ್ಲಿ ಪುಣೆ, ಬೆಂಗಳೂರು, ದೆಹಲಿ-ಎನ್‌ಸಿಆರ್ ಮತ್ತು ಮುಂಬೈನಂತಹ ನಗರಗಳಲ್ಲಿ ಇನ್ನೂ ನಾಲ್ಕು ರಿಟೇಲ್‌ ಸ್ಟೋರ್‌ಗಳನ್ನು ತೆರೆಯುವುದಾಗಿ  ಆಪಲ್ ಶುಕ್ರವಾರ ಪ್ರಕಟಿಸಿದೆ. ಭಾರತದಲ್ಲಿ ನಮ್ಮ ಗ್ರಾಹಕರ ಸೃಜನಶೀಲತೆ ಮತ್ತು ಉತ್ಸಾಹದಿಂದ ನಾವು ಪ್ರೇರಿತರಾಗಿರುವುದರಿಂದ ಭಾರತದಲ್ಲಿ ಹೆಚ್ಚಿನ ಸ್ಟೋರ್‌ಗಳನ್ನು ತೆರೆಯಲು ನಾವು ಪ್ಲ್ಯಾನ್‌ ಮಾಡುತ್ತಿದ್ದೇವೆ. ನಮ್ಮ ತಂಡಗಳನ್ನು ನಿರ್ಮಿಸಲು ನಾವು ಉತ್ಸಾಹಿತರಾಗಿದ್ದೇವೆ” ಎಂದು ಆಪಲ್‌ನ ರಿಟೇಲ್‌ ವ್ಯವಹಾರದ ಹಿರಿಯ ಉಪಾಧ್ಯಕ್ಷ ಡೀರ್ಡ್ರೆ ಒ’ಬ್ರಿಯಾನ್ ತಿಳಿಸಿದ್ದಾರೆ. ನಮ್ಮ ಅದ್ಭುತ ಉತ್ಪನ್ನಗಳು ಮತ್ತು ಸೇವೆಗಳನ್ನು ಅನ್ವೇಷಿಸಲು ಮತ್ತು ಶಾಪಿಂಗ್

ಬೆಂಗಳೂರಿಗೆ ಲಗ್ಗೆ ಇಡಲಿದೆ ಅಧಿಕೃತ ಆ್ಯಪಲ್ ಸ್ಟೋರ್; ಕಂಪೆನಿಯಿಂದ ಘೋಷಣೆ Read More »

ತಂತ್ರಜ್ಞಾನ

ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):   ಜುಲೈ ಮತ್ತು ಆಗಸ್ಟ್ ತಿಂಗಳ ಹಣ ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜುಲೈ ತಿಂಗಳ ಹಣ ಅ.07 ರಂದು ಮತ್ತು ಆಗಸ್ಟ್ ತಿಂಗಳ ಹಣ ಅ.09ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ Read More »

ಕರ್ನಾಟಕ

ಇನ್ನೂ 3 ದಿನ ಮುಂದುವರೆಯಲಿದೆ ಮಳೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.03): ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್‌ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ 3 ದಿನ ಮುಂದುವರೆಯಲಿದೆ ಮಳೆ Read More »

ಬ್ರೇಕಿಂಗ್ ನ್ಯೂಸ್

ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.03): ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅ. 4 ಮತ್ತು 5ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಅನಿವಾಸಿ ಕನ್ನಡಿಗರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಡು ನುಡಿ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ, ಸಂಘಟನ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನಪ್ರಶಸ್ತಿ“ ಗೌರವ ಪುರಸ್ಕಾರಕ್ಕೆ ಸತೀಶ್ ಕುಮಾರ್ ಬಜಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಾರ ಪರ್ವತ ಚಾರಣಕ್ಕೆ ನಾಳೆಯಿಂದ ಆನ್ಲೈನ್ ಟಿಕೆಟ್ ಗೆ ಚಾಲನೆ

(ನ್ಯೂಸ್ ಕಡಬ)newskadaba.com, (ಅ.02) : ಕುಮಾರ ಪರ್ವತಕ್ಕೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ  ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಕಟಿಸಿದ್ದಾರೆ. 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರು ಕಬ್ಬನ್ ಉದ್ಯಾನದಿಂದ ಲಾಲ್ ಬಾಗ್ ವರೆಗೆ ಅರಣ್ಯಇಲಾಖೆ ಆಯೋಜಿಸಿದ್ದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆಯಲ್ಲಿ ಪಾಲ್ಗೊಂಡು ಲಾಲ್ ಬಾಗ್ ನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲ ಚಾರಣ ಪಥಗಳಿಗೂ ಒಂದೇ ಅಂತರ್ಜಾಲ ತಾಣದಲ್ಲಿ ಟಿಕೆಟ್ ಖರೀದಿಸಲು

ಕುಮಾರ ಪರ್ವತ ಚಾರಣಕ್ಕೆ ನಾಳೆಯಿಂದ ಆನ್ಲೈನ್ ಟಿಕೆಟ್ ಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು

(ನ್ಯೂಸ್ ಕಡಬ) newskadaba.com ಸೆ. 27.ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದೆ. ಶನಿವಾರ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,740 ರೂ.ಗೆ ಇದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಓರ್ವ ಮಹಿಳಾ ನರ್ಸ್ ನ್ನು ನಿಯೋಜಿಸುವುದು ಕಡ್ಡಾಯಗೊಳಿಸಿ ಎಂದು ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಇತ್ತೀಚೆಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಸಿಬ್ಬಂದಿಗಳು ನಡೆಸಿದ ಪ್ರತಿಭಟನೆಗಳು ಆಸ್ಪತ್ರೆಗಳಲ್ಲಿ ರಾತ್ರಿ ಹೊತ್ತು ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿವೆ.  

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ
Scroll to Top