ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯ ಸರ ಕಳವು

(ನ್ಯೂಸ್ ಕಡಬ) newskadaba.com ನ. 09.ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ. ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ‌ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಹಾಜರಾದ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯ ಸರ ಕಳವು Read More »

ಕರಾವಳಿ