Bantwal news

ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟವರಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.   ಬಂದರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ‌ ಶಾಸಕ ಕಾಮತ್, ಬೋಟ್ ದುರಂತಕ್ಕೀಡಾಗಿರುವ‌ ವಿಚಾರ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ವಿಚಾರ ತಿಳಿದ ತಕ್ಷಣವೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಇಬ್ಬರ ಮೃತ ದೇಹ ಪತ್ತೆಯಾಗಿದ್ದು […]

ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ Read More »

ಕರಾವಳಿ

ಮಂಗಳೂರು: ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು (55) ಸೋಮವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ‘ವಾರ್ತಾಭಾರತಿ’ ದೈನಿಕದಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ವಾರದ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಸದಿಗಂತ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು. ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ, ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸೇರಿದಂತೆ

ಮಂಗಳೂರು: ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ Read More »

ಕರಾವಳಿ

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ರಾತ್ರಿ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.  

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಕಳೆದ ದಿನ ಸಂಭವಿಸಿದೆ.   ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ನಡೆದಿದ್ದು, ಇದರಿಂದಾಗಿ ತುಂಬಾ ಹೊತ್ತುವಾಹನಗಳು ಸಾಲುಗಟ್ಟಿ ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.    

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ Read More »

ಕರಾವಳಿ

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ

(ನ್ಯೂಸ್ ಕಡಬ) newskadaba.com ಮಲ್ಪೆ ನ. 29: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿ ಕಳೆದ ದಿನ  ಮುಳುಗಡೆಯಾಗಿತ್ತು. ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ . ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು.   ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ.

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ Read More »

ಕರಾವಳಿ, ಕರ್ನಾಟಕ

ಅಮಾನುಷವಾಗಿ ಜಾನುವಾರು ಸಾಗಾಟ ➤ ಐದು ದನಗಳ ರಕ್ಷಣೆ,ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ ನ. 27: ಅಮಾನುಷ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓಮ್ನಿ ಕಾರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು, ಐದು ದನಗಳನ್ನು ರಕ್ಷಿಸಿದ್ದು, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.   ಕಾರ್ಕಳ ಕಡೆಯಿಂದ ಮೂಡುಬಿದಿರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಹಿಂಸಾತ್ಮಕವಾಗಿ ದನಗಳನ್ನು ತುಂಬಿಸಿ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಪೊಲೀಸರು ಅನುಮಾನಗೊಂಡು ಪೇಟೆಯ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ತಡೆದಿದ್ದಾರೆ. ಕಾರು ನಿಲ್ಲಿಸಿ ಚಾಲಕ ಸಹಿತ ಇಬ್ಬರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಅಮಾನುಷವಾಗಿ ಜಾನುವಾರು ಸಾಗಾಟ ➤ ಐದು ದನಗಳ ರಕ್ಷಣೆ,ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 27: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ  ನಡೆದಿದೆ.   ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ Read More »

ಕರಾವಳಿ

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಮಹಿಳೆಯರು ಶಿಕ್ಷಣವಂತರಾಗಿ ಸ್ವ -ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ ತಿಳಿಸಿದರು. ಅವರು ಉಳ್ಳಾಲದ ಬಿ.ಎಂ. ಶಾಲೆ ಸಂಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ದಿನ ಕಾರ್ಯಕ್ರಮವನ್ನು

ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 24: ಸರಪಾಡಿ ಗ್ರಾಮದ ಮುನ್ನಲಾಯಿಪದವು ಎಂಬಲ್ಲಿ ವಸಂತಿ ಎಂಬವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ವಸಂತಿ ಹಾಗೂ ಅವರ ಮನೆಮಂದಿ ಶನಿವಾರ ಸುಳ್ಯಕ್ಕೆ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು. ಸೋಮವಾರ ಮುಂಜಾನೆ ಮನೆ ಒಳಗಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮನೆಯತ್ತ ತೆರಳಿದಾಗ ಮನೆಯೊಳಗೆ ಸಾಮಗ್ರಿ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕದಳ ಹಾಗೂ ವಸಂತಿಯವರಿಗೆ ಕರೆ ಮಾಡಿ ಮಾಹಿತಿ ನೀಡಿದರು.  

ಬಂಟ್ವಾಳ: ಮನೆ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 24: ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂವ್ ಮೆಂಟ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು. ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿ, ದೇಶದಲ್ಲಿ ದಿನಗಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಂಟ್ವಾಳ: ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ ➤ ವುಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ Read More »

ಕರಾವಳಿ
Scroll to Top