Bantwal news

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು. ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು Read More »

ಕರಾವಳಿ

ಗೂಡುದೀಪದಲ್ಲಿ ಕೊರೊನಾ ಜಾಗೃತಿ ➤ ಹಲವರ ಗಮನ ಸೆಳೆಯುತ್ತಿದೆ ಈ ಗೂಡುದೀಪ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 13: ದೀಪಾವಳಿಯ ಗೂಡುದೀಪದ ಮೂಲಕ ಕೊರೊನಾ ಜಾಗೃತಿ ಮೂಡಿಸುವ ಪ್ರಯತ್ನವನ್ನು ಕಾರ್ಕಳ ಪುರಸಭಾ ಸದಸ್ಯ ಶುಭದ್ ರಾವ್ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಗೂಡು ದೀಪದಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಹ್ಯಾಂಡ್ ವಾಶ್ ಮಾಡಿ ಮತ್ತು ಸಾಮಾಜಿಕ ಅಂತರ ಕಾಪಾಡಿ ಎಂಬ ಚಿತ್ರದೊಂದಿಗೆ ಸಂದೇಶಗಳನ್ನು ಬರೆದಿದ್ದಾರೆ.   ಪುರಸಭೆ ಸದಸ್ಯರಾಗಿರುವ ಶುಭದ್ ರಾವ್ ಕಳೆದ ಮೂರು ವರುಷಗಳಿಂದ ಗೂಡುದೀಪ ಸ್ಪರ್ದೆಯನ್ನು ಆಯೋಜಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್

ಗೂಡುದೀಪದಲ್ಲಿ ಕೊರೊನಾ ಜಾಗೃತಿ ➤ ಹಲವರ ಗಮನ ಸೆಳೆಯುತ್ತಿದೆ ಈ ಗೂಡುದೀಪ Read More »

ಕರಾವಳಿ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಣಿ ನ. 12: ಮಾಣಿ ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ಣಿಮ(30)ರವರು ನವೆಂಬರ್ 9 ರಂದು ಸಂಜೆ ವೇಳೆಗೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಯಿಂದ ಹೋದಾಕೆ ವಾಪಾಸ್ಸು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.     ಈ ಬಗ್ಗೆ ಪತಿ ಮಾಹಿತಿ ಪಡೆದು ಮಾಣಿ ಪೇಟೆಯಲ್ಲಿ ವಿಚಾರಿಸಿದಾಗ ಆಕೆ ಬಸ್ಸಿನಲ್ಲಿ ಹಾಸನ ಕಡೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 11: ಬಂಟ್ವಾಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ನೇಪಾಳ ಮೂಲದ ಯುವಕ ಸೇರಿ ಇಬ್ಬರನ್ನು ಇಂದು  ಪೋಲಿಸರು ಬಂಧಿದ್ದಾರೆ.       ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »

ಕರಾವಳಿ

ಕಲ್ಮಕಾರು : ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಲ್ಮಕಾರು  ನ. 08: ಕಲ್ಮಕಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಕಿಂಡಿ ಅಣೆಕಟ್ಟು ಸ್ವಚ್ಛಗೊಳಿಸಿದ್ದಾರೆ. ನ.07 ರ ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಕಲ್ಮಕಾರು ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಈ ಸ್ಛಚ್ಛತಾ ಕಾರ್ಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕರಾದ ಸೀತಾರಾಮ್, ತೇಜಕುಮಾರ್ ಕೊತ್ನಡ್ಕ,ತೇಜಕುಮಾರ್ ದಬ್ಬಡ್ಕ, ಶಿವರಾಮ ಮತ್ತು ಘಟಕದ ವಲಯ ಸಂಯೋಜಕರಾದ ಮಣಿಕಂಠ ಕಟ್ಟ ಸತೀಶ್ ಟಿ.ಎನ್ ಸೇರಿದಂತೆ

ಕಲ್ಮಕಾರು : ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತೆ Read More »

ಕರಾವಳಿ

ಕಡೇಶಿವಾಲಯ: ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 02: ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು 2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು 1. ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಆನೇಕ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.  

ಕಡೇಶಿವಾಲಯ: ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಕರಾವಳಿ

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25:  ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.     ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ Read More »

ಕರ್ನಾಟಕ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್”

(ನ್ಯೂಸ್ ಕಡಬ) newskadaba.com ಕಾರವಾರ, ಅ. 06: ಸಮುದ್ರದಲ್ಲಿ ಅತಿ ವೇಗವಾಗಿ ಈಜುವ ಮೀನುಗಳಲ್ಲಿ ಒಂದಾದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನೊಂದು ಅಂಕೋಲಾ ತಾಲೂಕಿನ ಗಾಭೀತಕೇಣಿಯ ಮೀನುಗಾರರ ಬಲೆಗೆ ಬಿದ್ದಿದೆ. ಸಾಮಾನ್ಯವಾಗಿ ಬಿಲ್ ಫಿಶ್ ಎಂಧು ಕರೆಯುವ ಚೂಪಾದ ಮುಖ , ಬೆನ್ನ ಮೇಲೆ ರೆಕ್ಕೆ ಹೊಂದಿರುವ ಸುಮಾರು ಐದು ಅಡಿ ಉದ್ದ ಅಪರೂಪದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನು ನಿಕ್ಕಿದೆ.  ಈ ಮೀನು ಅತಿದೊಡ್ಡ ಮೀನುಗಳಲ್ಲಿ ಇದು ಕೂಡಾ ಒಂದಾಗಿದ್ದು, ಅತ್ಯಂತ ವೇಗವಾಗಿ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್” Read More »

ಕರಾವಳಿ, ಕರ್ನಾಟಕ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top