Bantwal news

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.06. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕೆ.ಸಿ.ರೋಡ್ ಎಂಬಲ್ಲಿ ಸ್ಕಾರ್ಪಿಯೋ ಕಾರೋದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೆಎ.19.ಇವಿ.497 ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಗೆ ಸ್ಕಾರ್ಪಿಯೋ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರನನ್ನು ನಂದರಬೆಟ್ಟು ನಿವಾಸಿ ಉವೈಸ್ (21) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ […]

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಕರೋಪಾಡಿ ಗ್ರಾಮ ಪಂಚಾಯತ್ನ ಮಿತ್ತನಡ್ಕ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ಜಲೀಲ್ ಕರೋಪಾಡಿ ಅವರ ಸಹೋದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನ್ವರ್ ಕರೋಪಾಡಿ 449 ಮತಗಳನ್ನು ಗಳಿಸುವ ಮೂಲಕ ಜಯಗಳಿಸಿದ್ದಾರೆ. ಅನ್ವರ್ ಕರೋಪಾಡಿಯವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಕೋಡ್ಲ 320 ಮತಗಳನ್ನು ಗಳಿಸಿದ್ದಾರೆ. ಜುಲೈ 2ರಂದು ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಮತದಾನ ನಡೆದಿದ್ದು 790 ಮತಗಳು ದಾಖಲಾಗಿತ್ತು. ಅವುಗಳಲ್ಲಿ 21

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ Read More »

ಕರಾವಳಿ

ಕಾರು – ಬೈಕ್ ಡಿಕ್ಕಿ: ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.05. ಕಾರು ಹಾಗೂ ಬೈಕ್ ‌ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಬೆಳ್ಮಣ್ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉಚ್ಚಿಲ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು – ಬೈಕ್ ಡಿಕ್ಕಿ: ಸವಾರನಿಗೆ ಗಾಯ Read More »

ಕರ್ನಾಟಕ

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು ಜು.02. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 2 ರವರೆಗೆ ವಿಧಿಸಲಾಗಿದ್ದ  ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.  ದಕ್ಷಿಣ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ,

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು.02. ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರು ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾಗಿದ್ದರಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಇಂದು ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನ್ವರ್ ಕರೋಪಾಡಿ(ಮೃತ ಜಲೀಲ್ ರವರ ಸಹೋದರ) ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಭಟ್ ಕೋಡ್ಲ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ. ಮತದಾನವು ಮಿತ್ತನಡ್ಕ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿದ್ದು, ಮತದಾನ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ‌.

ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ Read More »

ಕರಾವಳಿ

ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. SDPI ಮುಖಂಡ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಎಂಬಾತನನ್ನು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಜೂನ್ 21ರಂದು ಬೆಂಜನಪದವು ಬಳಿ ಅಶ್ರಫ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಕೊಲೆಗೆ ಸಂಚು ನಡೆಸಿದ ಇಬ್ಬರಲ್ಲಿ ಒಬ್ಬನಾದ ದಿವ್ಯರಾಜ್ ಶೆಟ್ಟಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ, ಹತ್ಯೆಗೆ ಸಂಚು ರೂಪಿಸಿದ್ದ ಮುಖಂಡ ಭರತ್ ಕುಮ್ಡೇಲುವನ್ನು ಇಂದು

ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ Read More »

ಕರಾವಳಿ

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಹೆದ್ದಾರಿ ಬದಿಗಳಲ್ಲಿ ಕಾರ್ಯಾಚರಿಸುತ್ತಿದ್ದ ಬಾರ್ ಗಳನ್ನು 220 ಮೀಟರ್ ದೂರಕ್ಕೆ ಸ್ಥಳಾಂತರಿಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶವು ನಾಳೆಯಿಂದ ಜಾರಿಗೆ ಬರಲಿದೆ‌. ಮೊದಲು ಹೆದ್ದಾರಿಯಿಂದ 500 ಮೀ. ಅಂತರ ಇರಬೇಕೆಂದು ನೀಡಲಾಗಿದ್ದ ಆದೇಶವನ್ನು ತಿದ್ದುಪಡಿ ಮಾಡಿರುವ ಸುಪ್ರೀಂಕೋರ್ಟ್ 220 ಮೀ. ಅಂತರವನ್ನು ನಿಗದಿಪಡಿಸಿತ್ತು. ಈ ಆದೇಶದನ್ವಯ ದೇಶದಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬದಿಗಳಲ್ಲಿನ ಬಾರ್ ಗಳಿಗೆ ಕುತ್ತು ಬಂದಿದ್ದು, ನಾಳೆಯಿಂದ ಮುಚ್ಚಬೇಕಾಗಿದೆ. ಕಡಬದಲ್ಲಿನ ಬಾರ್ ಗಳೂ ಈ ಆದೇಶದ ಹೊರತಾಗಿಲ್ಲ.

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್ Read More »

ರಾಷ್ಟ್ರೀಯ ನ್ಯೂಸ್

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.30. ಇಲ್ಲಿಗೆ ಸಮೀಪದ ಕರಾಯದ ಕಲ್ಲೇರಿ ಎಂಬಲ್ಲಿ ಕಾರು ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಕಡಬದ ವ್ಯಕ್ತಿ ಓರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಗಾಯಾಳುವನ್ನು ಕಡಬದ ಕಳಾರ ನಿವಾಸಿ ಸಾಯಿಪ್ರಸಾದ್ ಪೈ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ Read More »

ಕರಾವಳಿ

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂ.30. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.30 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜು.02 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಮಂಗಳವಾರ ಆದೇಶಿಸಿದ್ದಾರೆ. ಅದರಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಜೂ.30. ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಬೆದರಿಸಿ ಸುಮಾರು ಒಂದು ಲಕ್ಷ ವೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಇಂದು ಬೆಳಗ್ಗಿನ ಜಾವ ಕೊಣಾಜೆ ಗ್ರಾಮದ ನಡುಪದವಿನಲ್ಲಿ ನಡೆದಿದೆ. ದಸ್ತಾವೇಜು ಬರಹಗಾರರಾಗಿರುವ ನಡುಪದವು ನಿವಾಸಿ ಸದಾಶಿವಯ್ಯ ಎಂಬವರ ಮನೆಯಿಂದ ಈ ದರೋಡೆ ನಡೆದಿದೆ. ಸುಮಾರು 30 ಸಾವಿರ ರೂ. ನಗದು ಹಾಗೂ 20 ಗ್ರಾಮ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಮನೆಯ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ
Scroll to Top