ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು
(ನ್ಯೂಸ್ ಕಡಬ) newskadaba.com, ಸೆ.13 ಮಂಗಳೂರು : ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್ ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲಿಸರು ಇದೊಂದು ಸುಳ್ಳು ದೂರು ಎಂದು ಆರೋಪಿಸಿ ದೂರುದಾರನ ವಿರುದ್ದವೇ ಜಾಮೀನು […]
