bantwal

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,  ಫೆ.13:  ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿನ ಗುಡ್ಡವೊಂದರಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಗಿಡ -ಮರಗಳು ಸುಟ್ಟು ಭಸ್ಮವಾಗಿದೆ.ನಿತ್ಯಾನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಿಂದ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ನಿತ್ಯಾನಂದ ಅವರು ಬಂಟ್ವಾಳ, ಮೂಡುಬಿದಿರೆ ಮತ್ತು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾದ ಕಾರಣ, ಸ್ಥಳೀಯ ನಿವಾಸಿಗಳೇ ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ […]

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ (52) ಎಂದು ಗುರುತಿಸಲಾಗಿದೆ.ಪೀಟರ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಮತ್ತು ತೀವ್ರ ಖಿನ್ನತೆಗೆ ಒಳಗಾಗಿದ್ದರು. ತಾನು ಯಾರನ್ನು ಅವಲಂಬಿಸುವಂತೆ ಆಗಬಾರದೆಂದು ತೀರ್ಮಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೀಟರ್ ಲೋಬೋ ಅವರ ಪತ್ನಿ ಅನಿತಾ ಲೋಬೊ

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ

(ನ್ಯೂಸ್‌ ಕಡಬ) newskadaba.com, ಸೆ. 03  ಬಂಟ್ವಾಳ : ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ನೋಡಲು ರಸ್ತೆಯಂತಿದ್ದರೂ, ಚಂದ್ರಗ್ರಹದ ಅಂಗಳದಂತಾಗಿದೆ. ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ಸದಾ ಒಂದಲ್ಲಾ ಒಂದು ಕಾರಣದಿಂದಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ರಸ್ತೆಯ ಸಮಸ್ಯೆ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದಿದ್ದು, ರಸ್ತೆ ರಿಪೇರಿ ಮಾಡಿ ಕೊಡಿ ಎಂಬ ಒತ್ತಾಯಗಳು ಕೇಳಿ ಬಂದಿವೆ. ರಾ.ಹೆ.75 ರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ಟೋಲ್ ಫ್ಲಾಝಾದ ಬಳಿಯ ಸರ್ವೀಸ್ ರಸ್ತೆಯು ಅವ್ಯವಸ್ಥೆಯಿಂದ

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ

(ನ್ಯೂಸ್‌ ಕಡಬ) newskadaba.com ಆ. 29. ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com, ಆ.28  ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.25 ಬಂಟ್ವಾಳ : ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಪೊಲೀಸರು ದಾಳಿ ನಡೆಸಿ ಸುಮಾರು 80 ಸಾವಿರ ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕಲ್ಲಡ್ಕ ಸಮೀಪದ ಪಟ್ಟೆಕೋಡಿಯಲ್ಲಿ ಶನಿವಾರ ನಡೆದಿರುತ್ತದೆ. ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿಗಳಾದ ಕಲ್ಲಡ್ಕ ನಿವಾಸಿಗಳಾದ ಉಗ್ರಾಣ ವ್ಯವಸ್ಥಾಪಕ ಉಮ್ಮರಬ್ಬ ಅಲಿಯಾಸ್ ಪುಟ್ಟುಮೋನು (47) ಮತ್ತು ಕಾರ್ಮಿಕ ರಫೀಕ್

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com, ಆ. 01: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜು. 25. ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಗುರುವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು, ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ

(ನ್ಯೂಸ್ ಕಡಬ) newskadaba.com , ಮೇ.15. ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ Read More »

ಕರಾವಳಿ
Scroll to Top