bantwal

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಅನುಮಾನಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಸವಾದ್ ರವರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್ ಅವರು, ಪ್ರಕರಣದ ಕುರಿತು ಸೂಕ್ತವಾಗಿ ತನಿಖೆ ನಡೆಸಿ, ಆರೋಪಿಗಳ ವಿರಿದ್ದ ಕಠಿಣ ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಸೂಚಿಸುವುದಾಗಿ ಹೇಳಿದರು. ಅಲ್ಲದೇ ಸವಾದ ಸಾವಿನ ಹಿಂದೆ ಗಾಂಜಾ ವ್ಯವಹಾರದ ಶಂಕೆಯಿರುವುದರಿಂದ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು […]

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ.

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 09. ಸೌದಿ ಅರೇಬಿಯಾದಲ್ಲಿ ವೃತ್ತಿಯಲ್ಲಿದ್ದ ಮಾಣಿ ಸಮೀಪದ ಸೂರಿಕುಮೇರು ನಿವಾಸಿ ದಿವಂಗತ ಅಬೂಬಕರ್ ರವರ ಪುತ್ರ ಅಬ್ದುಲ್ ರಝಾಕ್ ಎಂಬವರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ವೃತ್ತಿಯಲ್ಲಿದ್ದ ಅವರು ರಜೆಯಲ್ಲಿ ಮನೆಗೆ ಬಂದು 3 ತಿಂಗಳ ಹಿಂದೆಯಷ್ಟೇ ಮರಳಿ ವಿದೇಶಕ್ಕೆ ತರಳಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬಂಟ್ವಾಳ: ಮಗುಚಿಬಿದ್ದು ರಿಕ್ಷಾ ಜಖಂ ➤ 50 ಲೀ. ಹಾಲು ರಸ್ತೆಪಾಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 07. ದನವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆ ಸೊಸೈಟಿಯ ಸಮೀಪ ನಡೆದಿದೆ. ಆಜೇರು ನಿವಾಸಿ ಶಾಂತಾರಾಮ ರಾವ್ ಎಂಬವರು ರಿಕ್ಷಾದಲ್ಲಿ ಮಂಗಳವಾರದಂದು ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50 ಲೀಟರ್ ಹಾಲು ರಸ್ತೆ ಪಾಲಾಗಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು

ಬಂಟ್ವಾಳ: ಮಗುಚಿಬಿದ್ದು ರಿಕ್ಷಾ ಜಖಂ ➤ 50 ಲೀ. ಹಾಲು ರಸ್ತೆಪಾಲು Read More »

ಕರಾವಳಿ
crime, arrest, suspected

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 30. ವ್ಯಕ್ತಿಯೊಬ್ಬರಿಗೆ ಪರಿಚಿತ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಮ್ದೇಲು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿತೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಅವರಿಗೆ ಲೋಕೇಶ್, ರೋಷನ್, ಸುಜಿತ್ ಹಾಗೂ ಸುಮಂತ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳೆಲ್ಲ ನಿತೇಶ್ ಅವರಿಗೆ ಪರಿಚಿತರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಯ್ಯಪ್ಪ ಮಾಲಾಧಾರಿಗೆ ನಿಂದನೆ ಆರೋಪ ➤ ಮೀನು ವ್ಯಾಪಾರಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 28. ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟಬೆ ವರದಿಯಾಗಿದೆ‌. ಬಂಧಿತ ಆರೋಪಿಯನ್ನು ಗೂಡಿನಬಳಿ ನಿವಾಸಿ ಮೀನು ವ್ಯಾಪಾರಿ ಇಕ್ಬಾಲ್ ಎಂದು ಗರುತುಸಲಾಗಿದೆ. ಯಶ್ವಿತ್ ಎಂಬಾತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ಟಂಪೋದಲ್ಲಿ ಪಾರ್ಸೆಲ್ ಸರ್ವಿಸ್ ಮಾಡುತ್ತಿದ್ದ ಸಂದರ್ಭ ಆರೋಪಿ ಇಕ್ಬಾಲ್, ಇದು ನಮ್ಮ ಏರಿಯಾ. ಈ ಭಾಗಕ್ಕೆ ಹಿಂದೂಗಳು ಬರಬಾರದು ಎಂದಿದ್ದಲ್ಲದೇ ಅಯ್ಯಪ್ಪ

ಬಂಟ್ವಾಳ: ಅಯ್ಯಪ್ಪ ಮಾಲಾಧಾರಿಗೆ ನಿಂದನೆ ಆರೋಪ ➤ ಮೀನು ವ್ಯಾಪಾರಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 28. ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಬಂಟ್ವಾಳದಿಂದ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಮದ್ದ ನಿವಾಸಿ ಅಬೂಬಕ್ಕರ್ ಎಂಬವರ ಮಗ ಮಹಮ್ಮದ್ ನಿಜಾಮ್ ಎಂದು ಗುರುತಿಸಲಾಗಿದೆ. ಎಸ್ಸ್ಸೆಸ್ಸೆಲ್ಸಿ ತನಕ ವಿದ್ಯಾಭ್ಯಾಸ ಮಾಡಿದ್ದ ಈತ, ಪ್ರಸ್ತುತ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಇತ್ತೀಚೆಗೆ ತನ್ನ ದೇರಳಕಟ್ಟೆಯ ಗೆಳೆಯನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದು, ಆ ಬಳಿಕ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವುದಾಗಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ಬಂಟ್ವಾಳ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top