BBMP

‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com , ಮೇ.15. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು […]

‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಬಿಬಿಎಂಪಿಗೆ ಕೂಡಲೇ ಚುನಾವಣೆ- ಸುಪ್ರೀಂ ಕೋರ್ಟ್‌‌ಗೆ ಬಿಜೆಪಿ ಮನವಿ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಲು ಕೋರಿ ಬಿಜೆಪಿಯು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲರಾದ ಸಂದೀಪ್ ಪಾಟೀಲ್ ಅವರ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.

ಬಿಬಿಎಂಪಿಗೆ ಕೂಡಲೇ ಚುನಾವಣೆ- ಸುಪ್ರೀಂ ಕೋರ್ಟ್‌‌ಗೆ ಬಿಜೆಪಿ ಮನವಿ Read More »

ಕರ್ನಾಟಕ

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ತೆಗೆದುಕೊಂಡಿದೆ ಎಂದು ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಕಿಶೋರ್ ತಿಳಿಸಿದ್ದಾರೆ. ಭಾನುವಾರದ ಘಟನೆಯ ನಂತರ, ಸಂಬಂಧಪಟ್ಟ ನಾಗರಿಕರು ಮತ್ತು ಕಾರ್ಯಕರ್ತರು ವಾಟ್ಸಾಪ್, ಫೇಸ್‌ಬುಕ್ ಗುಂಪುಗಳು, ಸಹಾಯಕ ನಿರ್ದೇಶಕರಿಗೆ ವೈಯಕ್ತಿಕ ಫೋನ್ ಕರೆಗಳು ಮತ್ತು

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ Read More »

ಕರ್ನಾಟಕ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP Read More »

ಕರ್ನಾಟಕ

OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಶನಿವಾರ (ನ.30)ಕ್ಕೆ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂ. ಆಸ್ತಿ ತೆರಿಗೆ ವಸೂಲಿಯಾಗಿದೆ. ಈ ಮೂಲಕ ಪಾಲಿಕೆಯೂ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. 2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ

OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ Read More »

ಕರ್ನಾಟಕ

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. 118ಕೋಟಿ ರೂ. ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಬಿಬಿಎಂಪಿಯ 8 ಇಂಜಿನಿಯರ್ ಗಳನ್ನು ರಾಜ್ಯ ಸರಕಾರ ಅಮಾನತುಗೊಳಿಸಿದೆ. ಆರ್.ಆರ್ ನಗರದ ವಿಧಾಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಕೆಆರ್.ಐಡಿಎಲ್ ಗೆ ವಹಿಸಲಾಗಿದ್ದ ಕೆಲಸಗಳನ್ನು ಮಾಡದೇ ಬಿಲ್ ಮೊತ್ತ ಬಿಡುಗಡೆಯಾಗಿರುವುದು  ಲೋಕಾಯುಕ್ತ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತರ ಶಿಫಾರಸಿನ ಮೇರೆಗೆ ಸರಕಾರವು ಅಮಾನತು ಮಾಡಿದೆ. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು Read More »

ಕರ್ನಾಟಕ

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ನಿರೀಕ್ಷೆಯಂತೆ ಬೆಂಗಳೂರಿನ ರೇಸ್-ಕೋರ್ಸ್ ರಸ್ತೆಗೆ ಖ್ಯಾತ ದಿವಂಗತ ನಟ ಅಂಬರೀಶ್ ಹೆಸರನ್ನಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ. ರೇಸ್-ಕೋರ್ಸ್ ರಸ್ತೆಯ ರಾಂ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ ! Read More »

ಕರ್ನಾಟಕ

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10.  ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿದಾರರ ಸಂಘದ ಪದಾಧಿಕಾರಿಗಳು, ಪಾಲಿಕೆ ಅನುದಾನದಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಕಳೆದ 25 ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ ರೂ.2,700 ಕೋಟಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಗುತ್ತಿಗೆದಾರರಿಗೆ ಕಾರ್ಯನಿರ್ವಹಿಸಲು, ಕೆಲಸಗಾರರಿಗೆ ವೇತನ ನೀಡಲು ಕಷ್ಟವಾಗುತ್ತಿದ್ದು, ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!     Read More »

ಕರ್ನಾಟಕ

ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ. ಪೂರ್ವ ವಲಯದ ಮಲ್ಲೇಶ್ವರಂ ಉಪ ವಿಭಾಗೀಯ ವ್ಯಾಪ್ತಿಯಲ್ಲಿ ಅನುಷ್ಟಾನವಾಗುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಗಿರಿನಾಥ್, ಎಂಇಎಸ್ ಕಾಲೇಜ್ ರಸ್ತೆಯಲ್ಲಿ ಸರಿಯಾದ ಪಾದಚಾರಿ ಮಾರ್ಗವನ್ನು ನಿರ್ಮಿಸಬೇಕು, ಒಳಚರಂಡಿಯಿಂದ ಹೂಳು ತೆಗೆಯ ಬೇಕು ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ನಿರ್ದೇಶಿಸಿದರು ಎನ್ನಲಾಗಿದೆ.    

ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ Read More »

ಕರ್ನಾಟಕ
Scroll to Top