ಮಾರ್ಚ್ 1ರಿಂದ ಜಾನಪದ ಕಡಲೋತ್ಸವ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮವು ಪಣಂಬೂರು ಬೀಚ್ ನಲ್ಲಿ ಮಾರ್ಚ್ 1ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮಾರ್ಚ್ 1ರಿಂದ ಜಾನಪದ ಕಡಲೋತ್ಸವ Read More »
ಕರಾವಳಿ
