Belthangadi

ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ, ಡಿ.10   ತನ್ನ ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ನಗದು ಸಮೇತ ಕಳವಾದ ಘಟನೆ ಬೆಳ್ತಂಗಡಿ ತಾಲೂಕು ನಾವೂರು ಪೇಟೆಯಲ್ಲಿ ಸೋಮವಾರದಂದು ನಡೆದಿದೆ. ಎನ್.ಎ.ಉಸ್ಮಾನ್ ರವರ 23,000/- ರೂ. ಬೆಳಿಗ್ಗೆ 09:00 ಗಂಟೆಯಿಂದ 10:00 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28.  ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಎಂ ಜಿ ಬಾಸ್ಕರ ಎಂಬವರು ತನ್ನ ಪತ್ನಿ, ಮಗಳು, ಹಾಗೂ ಮೊಮ್ಮಗಳಾದ ಶ್ರಾವ್ಯ ಎಂಬವರೊಂದಿಗೆ ಉಜಿರೆ ಪೇಟೆಯ ಅಮೃತ ಟೆಕ್ಸ್ ಟೈಲ್ಸ್ ಅಂಗಡಿಯ ಮುಂಭಾಗದಲ್ಲಿ ರಸ್ತೆಯನ್ನು ದಾಟಲು ನಿಂತಿದ್ದಾಗ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕೊಂದು ಶ್ರಾವ್ಯ ನಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಬಿದ್ದ ಪರಿಣಾಮ ಹಣೆಗೆ

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಪ್ರವಾಹದಿಂದ ಹಾನಿಯಾಗಿರುವ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 30 ಕೋ.ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಾಗೂ ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಶನಿವಾರದಂದು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಪ್ರವಾಹದಿಂದ ಹಾನಿಯಾಗಿರುವ ಪ್ರದೇಶದಲ್ಲಿ ನದಿಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಅವರ ವರದಿಯ ಆಧಾರದಲ್ಲಿ ತಡೆಗೋಡೆಗೆ ಅನುದಾನ ನೀಡುವ ಕಾರ್ಯ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.06. ಯುವತಿಯೋರ್ವಳು ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ನಾವೂರು ಎಂಬಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಬೆಳ್ತಂಗಡಿ ನಾವೂರು ನಿವಾಸಿ ಮಹಮ್ಮದ್ ಎಂಬವರ ಪುತ್ರಿ ಸೌಲತ್(21) ಎಂದು ಗುರುತಿಸಲಾಗಿದೆ. ಈಕೆ ತನ್ನ ಕೊಠಡಿಯಲ್ಲಿ ನೇಣು ಬಿಗಿದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದರಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾಳೆ.

ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

► ಬೆಳ್ತಂಗಡಿ: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.01. ಕಾಡು ಹಂದಿಯ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲ್ಲೂಕಿನ ತಣ್ಣೀರುಪಂತ ಗ್ರಾಮದ ಮಡಪ್ಪಾಡಿ‌ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಹಂದಿ ದಾಳಿಗೆ ಬಳಿಯಾದವರನ್ನು ಬೆಳ್ತಂಗಡಿ ತಾಲ್ಲೂಕಿನ ತಣ್ಣೀರುಪಂತ ಗ್ರಾಮದ ಮಡಪ್ಪಾಡಿ‌ ನಿವಾಸಿ ಗಂಗಾಧರ(45 ) ಎಂದು ಗುರುತಿಸಲಾಗಿದೆ. ಇವರ ಮನೆ ಸಮೀಪದಲ್ಲಿ ಅರಣ್ಯ ಇಲಾಖೆಗೆ ಸೇರಿದ ರಕ್ಷಿತಾರಣ್ಯವಿದ್ದು, ಈ ಕಾಡಿನಿಂದ ಬಂದ ಕಾಡು ಹಂದಿ ಗಂಗಾಧರ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ವಲಯ

► ಬೆಳ್ತಂಗಡಿ: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ Read More »

ಕರಾವಳಿ

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.29. ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಮೃತಪಟ್ಟು,‌ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಗರಡಾಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟವರನ್ನು ಗುರುವಾಯನಕೆರೆ ಸಮೀಪದ ಕುವೆಟ್ಟು ನಿವಾಸಿಗಳಾದ ವಿನಾಯಕ ಹಾಗು ವಿಶ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ತಾಯಿ-ಮಗುವಿನ ಪ್ರಾಣ ಉಳಿಸಲು ಗ್ರಾ.ಪಂ. ನೌಕರರಿಂದ ಧನ ಸಹಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಕಳೆದ ಹಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್‍ನಲ್ಲಿ ಕನಿಷ್ಠ ವೇತನದಲ್ಲಿ ಸೇವೆ ಸಲ್ಲಿಸುತ್ತಿರುವ ಪುಷ್ಪಾವತಿ ಎಂಬಾಕೆಯು ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು 10 ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರಿಗೆ ವಾರದ ಹಿಂದೆ ವಿಪರೀತ ಜ್ವರ ಬಂದ ಕಾರಣ ತುರ್ತು ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರತೆಗೆದು ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ಹಾಗೂ ಪುಷ್ಪಾವತಿಯವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿಲಾಗಿತ್ತು. ರಾಜ್ಯ ಸರಕಾರದ ಪಂಚಾಯತ್

ತಾಯಿ-ಮಗುವಿನ ಪ್ರಾಣ ಉಳಿಸಲು ಗ್ರಾ.ಪಂ. ನೌಕರರಿಂದ ಧನ ಸಹಾಯ Read More »

ಕರಾವಳಿ
Scroll to Top