bengaluru

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, […]

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು ಇಂದು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ Read More »

ಕರ್ನಾಟಕ

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಅತಿವೇಗದ ಎರಡು ರೈಲುಗಳ ವಿನ್ಯಾಸ ಹಾಗೂ ತಯಾರಿಕೆಗೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ಅಧೀನಕ್ಕೆ ಸೇರಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ (ಐಸಿಎಫ್‌) 866.87 ಕೋಟಿ ರು. ಮೌಲ್ಯದ ಗುತ್ತಿಗೆ ಲಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಇಎಂಎಲ್‌ ಮಂಗಳವಾರ ತಿಳಿಸಿದೆ. ಪ್ರತಿ ರೈಲು ಎಂಟು ಬೋಗಿಗಳನ್ನು ಒಳಗೊಂಡಿದ್ದು, ಗಂಟೆಗೆ 280 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಮುಂಬೈ ಹಾಗೂ ಅಹಮದಾಬಾದ್ ನಡುವೆ ನಿರ್ಮಿಸಲಾಗುತ್ತಿರುವ ಅತಿವೇಗದ ರೈಲ್ವೆ

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌ Read More »

ಕರ್ನಾಟಕ

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ Read More »

ಕರ್ನಾಟಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಶಬಾನಾ (44) ಎಂದು ಗುರುತಿಸಲಾಗಿದೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಈ ಘಟನೆ ಬಳಿಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ‘ಕುಸುಮ್‌– ಸಿ’ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಸೋಮವಾರ ಸೂಚನೆ ನೀಡಿದ್ದಾರೆ. ಕುಸುಮ್‌ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜೊತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್‌ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು ಎಂದು ತಾಕೀತು ಮಾಡಿದರು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸಲಾಗುತ್ತದೆ ಎಂಬ

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ Read More »

ಕರ್ನಾಟಕ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು,ಅ. 12.   ಒಂದು ಮೆಸೇಜ್‌ನಿಂದ ಯುವಕನೊಬ್ಬ ತನ್ನ ಕೆಲಸವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತ ತನ್ನ ಸಹೋದ್ಯೋಗಿ ಮಹಿಳೆಯ ಬಟ್ಟೆ ಧರಿಸುವಿಕೆಯ ಬಗ್ಗೆ ಕಮೆಂಟ್‌ ಮಾಡಿದ್ದು, ಈ ಕುರಿತು ದೂರು ದಾಖಲಿಸಲಾಗಿತ್ತು. ಮಹಿಳೆಗೆ ಆಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡುವ ಮೂಲಕ ದೂರು ನೀಡಿದ್ದರು. ಯುವಕ ನಿಖಿತ್ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಬೆಂಗಳೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಭಾರತ ಭೇಟಿಯಲ್ಲಿರುವ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರಿನಲ್ಲಿ ಇಂದು ಸಂಜೆ ಅವರು ಮಾಲ್ದೀವ್ಸ್‌ ಡಯಾಸ್ಪೋರಾವನ್ನು ಭೇಟಿಯಾಗಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮುಹಮ್ಮದ್ ಹಾಗೂ ಅವರ ನಿಯೋಗವನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಇತರರು ಆತ್ಮೀಯವಾಗಿ ಸ್ವಾಗತಿಸಿದರು.  

ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಬೆಂಗಳೂರಿಗೆ ಆಗಮನ Read More »

ಕರ್ನಾಟಕ
Scroll to Top