bengaluru

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ. […]

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ Read More »

ಕರ್ನಾಟಕ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ Read More »

ಕರ್ನಾಟಕ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 4. ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ಒಡೆತನದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ 2024-25ರ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಪುಟ್ಬಾಲ್ ಪಂದ್ಯದ ಪ್ರಾಯೋಜಕತ್ವಕ್ಕೆ ಸಜ್ಜಾಗಿದ ಈ ಹೆಜ್ಜೆ ರಾಜ್ಯದ ಹೆಸರಾಂತ ಡೈರಿ ಬ್ರ್ಯಾಂಡ್ ನಂದಿನಿಯನ್ನು ಪ್ರಚಾರ ಮಾಡುವ ಗುರಿಯ ಭಾಗವಾಗಿದೆ ಎಂದು ಹೇಳಲಾಗಿದೆ. ಇಂಡಿಯನ್ ಸೂಪರ್ ಲೀಗ್ ನ 11ನೇ ಸೀಸನ್ ಸೆ. 2024 ರಿಂದ ಮಾ. 2025ರವರೆಗೆ ನಡೆಯಲಿದ್ದು, ಪಂದ್ಯದಲ್ಲಿ 13 ತಂಡಗಳು ಸ್ಪರ್ಧಿಸಲಿವೆ. ಮನಿ ಕಂಟ್ರೋಲ್‌

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ Read More »

ಕರ್ನಾಟಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್ Read More »

ಕರ್ನಾಟಕ

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ ಎಂದು ತಿಳಿದುಬಂದಿದೆ. 10ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು ರಚಿಸಲಾದ ಹುದ್ದೆಗಳ ಸಂಖ್ಯೆ ಕಡಿಮೆಯಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆಯ್ಕೆಯಾದ 267 ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಔಪಚಾರಿಕ ಶಿಕ್ಷಣದ ಕೊರತೆಯಿರುವ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಮೂಲ ಸಾಕ್ಷರತಾ ಕೌಶಲ್ಯವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಾಕ್ಷರ ಸನ್ಮಾನ’ (ಸಾಕ್ಷರತೆ ಗೌರವ) ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಯೋಜನೆಯಲ್ಲಿ 6,346 ಜನರಿಗೆ ತರಬೇತಿ ನೀಡಲಾಗುತ್ತದೆ. ಅದರಲ್ಲಿ ಮುಖ್ಯವಾಗಿ 5,234 ಚುನಾಯಿತ ಪ್ರತಿನಿಧಿಗಳಿದ್ದಾರೆ. ಈ ಕಾರ್ಯಕ್ರಮವನ್ನು ಕೌಶಲ್ಯಗಳನ್ನು ಒದಗಿಸಲು ಮಾತ್ರವಲ್ಲದೆ ಕರ್ನಾಟಕದ ಮೇಲೆ ಗಣನೀಯವಾಗಿ ಪರಿಣಾಮ ಬೀರುವ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ನರ್ಸಿಂಗ್ ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಪ್ರಾಧಿಕಾರ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಹಾಗೂ ಅಸಮರ್ಪಕ ಸೌಲಭ್ಯಗಳ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಈ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಮುಂದಾಗಿದೆ. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಇದೇ

ನರ್ಸಿಂಗ್ ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಪ್ರಾಧಿಕಾರ ರಚನೆ Read More »

ಕರ್ನಾಟಕ
Scroll to Top