bengaluru

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ […]

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ Read More »

ಕರ್ನಾಟಕ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳನ್ನು ತ್ವರಿತವಾಗಿ ನಿರ್ವಹಿಸಲು ಮತ್ತು ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 28 ತಂಡಗಳನ್ನು ರಚಿಸಿದೆ. ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ ‘ಮರಗಳ ವ್ಯವಸ್ಥಿತ ನಿರ್ವಹಣಾ ತಂಡ’ ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ. ಮಳೆಗಾಲದಲ್ಲಿ ಗಾಳಿ ಹೆಚ್ಚಾಗಿ ನಗರದ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಬೀಳುವುದರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ Read More »

ಕರ್ನಾಟಕ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚನ್ನಪಟ್ಟಣ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಭೇಟಿ ನಂತರ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು Read More »

ಕರ್ನಾಟಕ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣ ರದ್ದುಗೊಳಿಸುವಂತೆ ಹೆಚ್.ಡಿ.ರೇವಣ್ಣ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಹೆಚ್‌ಡಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್‌ಐಆರ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್ Read More »

ಕರ್ನಾಟಕ

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ. ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ. ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು ಎನ್ನಲಾಗಿದೆ.    

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ Read More »

ಕರ್ನಾಟಕ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣ ರದ್ದು ಪಡಿಸುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು, ಇಂದು ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಜನ ಪ್ರತಿನಿಧಿಗಳ ಕಾಯ್ದೆ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ Read More »

ಕರ್ನಾಟಕ

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌ ಈ ಮೊದಲು ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ.

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ Read More »

ಕರ್ನಾಟಕ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿರುವ ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ, ಜನರಿಗೆ ತಾವು ತಿನ್ನುವ ಆಹಾರವನ್ನು ತಾವೇ ಪರೀಕ್ಷಿಸುವ ಅವಕಾಶವನ್ನು ನೀಡಲು ಸಜ್ಜಾಗಿದೆ. ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಫುಡ್ ಕೋರ್ಟ್ ಮತ್ತು ಮಾಲ್‌ ಗಳ ಬಳಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪರೀಕ್ಷಾ ಕಿಟ್‌ಗಳು ಲಭ್ಯವಿರಲಿದ್ದು, ಜನರೇ ತಾವು ತಿನ್ನುವ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಹೊಟೆಲ್

ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ
Scroll to Top