bengaluru

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು […]

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಯ ನೀಡಿದರು. ಆರ್ಹರ ಬಿಪಿಎಲ್ ಕಾರ್ಡ್‌ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಗಮನ ಸೆಳೆದಾಗ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ Read More »

ಕರ್ನಾಟಕ

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ರಾಜ್ಯ ಚುನಾವಣಾ ಆಯೋಗ ಘೋಷಿಸಿರುವ ವೇಳಾಪಟ್ಟಿಯಂತೆ ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌ಗಳ ಸದಸ್ಯ ಸ್ಥಾನಗಳಿಗೆ ನವೆಂಬರ್‌ 23ರಂದು ಉಪ ಚುನಾವಣೆಯ ಮತದಾನ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನ.26ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಚಿತ್ರದುರ್ಗ, ಚಳ್ಳಕೆರೆ, ಅರಸೀಕರೆ, ನಿಪ್ಪಾಣಿ, ಇಳಕಲ್‌, ಶಹಾಬಾದ್‌, ರಾಯಚೂರು, ಸಿಂಧನೂರು, ಕೊಪ್ಪಳ ನಗರಸಭೆಗಳಲ್ಲಿ

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ Read More »

ಕರ್ನಾಟಕ

ಕರ್ನಾಟಕದ ಮೊದಲ ಸ್ಲೀಪರ್ ‘ವಂದೇ ಭಾರತ್’ ರೈಲು ಆರಂಭ

(ನ್ಯೂಸ್ ಕಡಬ) newskadaba.com ನ. 19. ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು ಸಂಚಾರ ನಡೆಸಲಿದೆ. ಈ ಹೊಸ ಸೇವೆಯು ಬೆಂಗಳೂರು ಮತ್ತು ಬೆಳಗಾವಿಯನ್ನು ಸಂಪರ್ಕಿಸಲಿದ್ದು, ಪ್ರಯಾಣಿಕರಿಗೆ ವೇಗ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಆಯ್ಕೆಯನ್ನು ನೀಡುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮುಂದಿನ ತಿಂಗಳು ರೈಲು ಸಂಚಾರ ಆರಂಭಿಸಲಿದೆ ಎಂದು ಘೋಷಿಸಿದ್ದು,

ಕರ್ನಾಟಕದ ಮೊದಲ ಸ್ಲೀಪರ್ ‘ವಂದೇ ಭಾರತ್’ ರೈಲು ಆರಂಭ Read More »

ಕರ್ನಾಟಕ

ಸಂಚಾರ ನಿಯಮ ಉಲ್ಲಂಘನೆ- 5 ಗಂಟೆಗಳಲ್ಲಿ 7.62 ಲಕ್ಷ ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ಕಾರ್ಯಾಚರಣೆ ಕೈಗೊಂಡಿರುವ ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಶನಿವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಒಟ್ಟು 1,507 ಪ್ರಕರಣಗಳನ್ನು ದಾಖಲಿಸಿ, 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.  

ಸಂಚಾರ ನಿಯಮ ಉಲ್ಲಂಘನೆ- 5 ಗಂಟೆಗಳಲ್ಲಿ 7.62 ಲಕ್ಷ ದಂಡ ಸಂಗ್ರಹ Read More »

ಕರ್ನಾಟಕ

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಸಂತ್ರಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಠಿತ ಕನಕ ಶ್ರೀ ಪ್ರಶಸ್ತಿಯನ್ನು ಬಳ್ಳಾರಿಯ ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು

ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ‘ಕನಕ ಶ್ರೀ ಪ್ರಶಸ್ತಿ’ ಪ್ರದಾನ Read More »

ಕರ್ನಾಟಕ

ಮದ್ಯ ಪ್ರಿಯರಿಗೆ ಶಾಕ್..! ನಾಳೆ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್..!

(ನ್ಯೂಸ್ ಕಡಬ) newskadaba.com ನ. 19. ರಾಜ್ಯದ ಮದ್ಯ ಪ್ರಿಯರಿಗೆ ಇದೊಂದು ಶಾಕಿಂಗ್ ಸುದ್ದಿ. ನಾಳೆ ರಾಜ್ಯದ ಯಾವ ಮೂಲೆಯಲ್ಲಿಯೂ ಸಿಗುವುದಿಲ್ಲ ಮದ್ಯ. ಸರ್ಕಾರದ ವಿರುದ್ದ ಸಿಡಿದೆದ್ದಿರುವ ಮದ್ಯ ವ್ಯಾಪಾರಿಗಳು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದಾರೆ. ಇಲಾಖೆಯ ವಿಪರೀತ ಭ್ರಷ್ಟಾಚಾರದಿಂದ ಬೇಸತ್ತ ಮದ್ಯ ವ್ಯಾಪಾರಿಗಳು, ಮದ್ಯ ಮಾರಾಟ ನಿಲ್ಲಿಸಲು ನಿರ್ಧರಿಸಿದ್ದಾರೆ. ಒಂದು ದಿನ ಪೂರ್ತಿ ಮದ್ಯ ಮಾರಾಟ ನಿಲ್ಲಿಸುವ ಮೂಲಕ ಸರ್ಕಾರಕ್ಕೆ ಬುದ್ದಿ ಕಲಿಸಲು ಮದ್ಯ ಮಾರಾಟಗಾರರು ಮುಂದಾಗಿದ್ದಾರೆ.  ಈ ಕುರಿತಂತೆ ಇಂದು ಮದ್ಯ ಮಾರಾಟಗಾರರು

ಮದ್ಯ ಪ್ರಿಯರಿಗೆ ಶಾಕ್..! ನಾಳೆ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್..! Read More »

ಕರ್ನಾಟಕ

ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 18. ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವ ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನ ಅಭಿವೃದ್ಧಿ ಪಡಿಸಲು‌ ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಇದಕ್ಕಾಗಿ 1500 ಕೋಟಿ ರೂ. ವೆಚ್ಚವಾಗಲಿದ್ದು ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್‌) ರಚಿಸಲಾಗಿದೆ ಎಂದರು.  

ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ- ಸಚಿವ ಸೋಮಣ್ಣ Read More »

ಕರ್ನಾಟಕ
Crime

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ನ. 16.  ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತೇಜಸ್ (14) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಕಳೆದ 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌,

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿ. 18ರವರೆಗೆ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 14.  ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ,

ಡಿ. 18ರವರೆಗೆ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ Read More »

ಕರ್ನಾಟಕ
Scroll to Top