bjp

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಅ.24.  ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ […]

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »

ಕರಾವಳಿ

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಅ.23. ಕಾಂಗ್ರೆಸ್ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಸಿಪಿ ಯೋಗೇಶ್ವರ್ ನಂಬಿಕೆಗೆ ಅಪಚಾರ ಮಾಡಿ ಹೋಗಿದ್ದಾರೆ ಎಂದು ಸಿಪಿವೈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ Read More »

ಕರ್ನಾಟಕ

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »

ಕರ್ನಾಟಕ

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ

(ನ್ಯೂಸ್ ಕಡಬ) newskadaba.com ಅ.21 ಹೊಸದಿಲ್ಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ತನ್ನ ಸದಸ್ಯತ್ವವನ್ನು 10 ಕೋಟಿಗೆ ಏರಿಸಿಕೊಳ್ಳುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಬಿಜೆಪಿ ಪಕ್ಷ ಪ್ರಸ್ತುತ ನಡೆಸುತ್ತಿರುವ ಸದಸ್ಯತ್ವ ಅಭಿಯಾನವು ಮುಂದುವರೆದಿರುವಂತೆಯೇ ಪಕ್ಷದ ಸದಸ್ಯತ್ವವು ಇದೀಗ 10 ಕೋಟಿಗೆ ಏರಿದೆ. ಪಕ್ಷದ ಸದಸ್ಯತ್ವ ಅಭಿಯಾನವು ಅಕ್ಟೋಬರ್ 11 ರಂದು ಪ್ರಾರಂಭವಾಗಿತ್ತು. ಅಂತೆಯೇ ಇದು ಅಕ್ಟೋಬರ್ ಅಂತ್ಯದವರೆಗೆ ಇರುತ್ತದೆ.ನಂತರ ನವೆಂಬರ್ 1 ರಿಂದ 5 ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಸದಸ್ಯರು 100 ರೂಪಾಯಿಗಳನ್ನು

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ Read More »

ರಾಷ್ಟ್ರೀಯ ನ್ಯೂಸ್

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಅ. 11. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ Read More »

ಕರ್ನಾಟಕ

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 26. ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ ಕೂಗಲಾಯಿತು.

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಘನತೆವೆತ್ತ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು

ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್ Read More »

ಕರ್ನಾಟಕ

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 13. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರದಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ಇದೀಗ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..! Read More »

ಕರಾವಳಿ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top