ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ, […]









