ಅಮೃತಸರದ ಠಾಕೂರ್‌ ದ್ವಾರ್ ದೇಗುಲದ ಎದುರು ಸ್ಫೋಟ

(ನ್ಯೂಸ್ ಕಡಬ) newskadaba.com ಮಾ. 15 : ಪಂಜಾಬ್‌ ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಬಳಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಗೋಡೆ ಹಾಗೂ ಕಿಟಕಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಹಾನಿಯಾಗಿಲ್ಲ. ಆದರೆ ಖಂಡ್ವಾಲಾ ಪ್ರದೇಶದ ಸುತ್ತಮುತ್ತ ಸ್ಫೋಟದ ಶಬ್ದದಿಂದ ಜನರು ಭಯಭೀತರಾಗಿದ್ದಾರೆ. ಅಪರಿಚಿತ ವ್ಯಕ್ತಿಗಳು ದೇವಾಲಯದ ಬಳಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕೆಲ ಸೆಕೆಂಡುಗಳ ಕಾಲಕಾದ ಅವರು, ದೇವಾಲಯದತ್ತ ಸ್ಫೋಟಕಗಳನ್ನು ಎಸೆದು, ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರದ ಠಾಕೂರ್‌ ದ್ವಾರ್ ದೇಗುಲದ ಎದುರು ಸ್ಫೋಟ Read More »

ಕರ್ನಾಟಕ