block congress

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಶುಕ್ರವಾರದಂದು ಕಡಬ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಅವರ ನೇತೃತ್ವದಲ್ಲಿ ತಹಶಿಲ್ದಾರ್ ಕಛೇರಿ ಎದುರು ಜಮಾಯಿಸಿದ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ […]

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ Read More »

ಕರಾವಳಿ

ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ, ಜು.31. ಕಾಂಗ್ರೆಸ್ ಪಕ್ಷದಿಂದ ದಲಿತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗೇಸ್ ಸಮಿತಿಯ ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಅವರ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜಿನಾಮೆ ನೀಡಿದ ಘಟನೆ ಸೋಮವಾರದಂದು ನಡೆದಿದೆ. ಪಕ್ಷದ ಸಮಾವೇಶಕ್ಕೆ ಆಗಮಿಸಿದ್ದ ಪಕ್ಷದ ನೂತನ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಗುರುವಪ್ಪನವರು ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದರು. ತಾನು ಹಲವಾರು ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಹಗಲಿರುಳು ದುಡಿದಿದ್ದು, ಎರಡು ಎಸ್ಸಿ ಘಟಕದ

ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ Read More »

ಕರಾವಳಿ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

(ನ್ಯೂಸ್ ಕಡಬ) newskadaba.com ಕಡಬ, ಜು.31. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರಕಾರ ನೀಡಿರುವ ಭರವಸೆಯನ್ನು ಈಡೇರಿಸಿ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಆಧಿಕಾರಕ್ಕೆ ಬರುವುದು ಖಚಿತವಾಗಿದ್ದು ದ.ಕ. ಜಿಲ್ಲೆಯ ಎಂಟು ಕ್ಷೇತ್ರದಲ್ಲಿ ಈಗಾಗಲೇ ಏಳು ಕ್ಷೇತ್ರ ನಮ್ಮ ಕೈಯಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಎಂಟರಲ್ಲಿ ಎಂಟು ಕ್ಷೇತ್ರವೂ ಕಾಂಗ್ರೇಸ್ ತೆಕ್ಕೆಗೆ ತರುವುದು ನಮ್ಮಲ್ಲೆರ ಗುರಿಯಾಗಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಕರೆ ನೀಡಿದರು. ಅವರು ಸೋಮವಾರದಂದು ಕಡಬ ಅನುಗ್ರಹ ಸಭಾಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ನಡೆದ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ Read More »

ಕರಾವಳಿ

ಸೋಮವಾರದಂದು ಕಡಬದಲ್ಲಿ ಕಾಂಗ್ರೆಸ್ ತಾಲೂಕು ಮಟ್ಟದ ಕಾರ್ಯಕರ್ತರ ಸಮಾವೇಶ ► ರಾಜ್ಯದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ತಾಲೂಕು ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶವು ಜುಲೈ 31 ನೇ ಸೋಮವಾರ ಬೆಳಿಗ್ಗೆ ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ

ಸೋಮವಾರದಂದು ಕಡಬದಲ್ಲಿ ಕಾಂಗ್ರೆಸ್ ತಾಲೂಕು ಮಟ್ಟದ ಕಾರ್ಯಕರ್ತರ ಸಮಾವೇಶ ► ರಾಜ್ಯದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತಿ Read More »

ಕರಾವಳಿ

ಕೋಡಿಂಬಾಳ ರೈಲ್ವೇ ಅಭಿವೃದ್ಧಿ ಹಿನ್ನೆಡೆಯಾಗಲು ಸಂಸದರೇ ಕಾರಣ: ಕಡಬ ಬ್ಲಾಕ್ ಕಾಂಗ್ರೇಸ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.16. ಇಲ್ಲಿಗೆ ಸಮೀಪದ ಕೋಡಿಂಬಾಳ ರೈಲ್ವೇ ನಿಲ್ದಾಣ ಮೂಲಭೂತ ಸೌಕರ್ಯಗಳಿಂದ ವಂಚಿವಾಗಲು ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲದ ದ.ಕ ಲೋಕಸಭಾ ಸದಸ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕಡಬ ಬ್ಲಾಕ್ ಕಾಂಗ್ರೇಸ್ ಆರೋಪಿಸಿದೆ. ಕಡಬ ಬ್ಲಾಕ್ ಕಾಂಗ್ರೇಸ್ನ ನೂತನ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಕಡಬ ಅಂಬೇಡ್ಕರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಕೋಡಿಂಬಾಳ ರೈಲ್ವೇ ನಿಲ್ದಾಣವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಸಂಸದರು ಯಾವುದೇ ಕಾಳಜಿವಹಿಸುತ್ತಿಲ್ಲ. ಕೇವಲ ಭರವಸೆ ನೀಡಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ ಎಂದು

ಕೋಡಿಂಬಾಳ ರೈಲ್ವೇ ಅಭಿವೃದ್ಧಿ ಹಿನ್ನೆಡೆಯಾಗಲು ಸಂಸದರೇ ಕಾರಣ: ಕಡಬ ಬ್ಲಾಕ್ ಕಾಂಗ್ರೇಸ್ ಆರೋಪ Read More »

ಕರಾವಳಿ
Scroll to Top