Block

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಘಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಡಬ ಸಮೀಪದ ಹೊಸಮಠ ಮುಳುಗು ಸೇತುವೆಯು ಗುರುವಾರ ಮಧ್ಯಾಹ್ನದ ಬಳಿಕ ಮತ್ತೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದ ಕಡಬ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರ ಪರಿಣಾಮ ನದಿ, ಹಳ್ಳ, ಹೊಳೆಗಳು ತುಂಬಿ ಹರಿಯತೊಡಗಿವೆ. ಗುರುವಾರ ಬೆಳಿಗ್ಗೆಯಿಂದಲೇ ಕಡಬ ಸಮೀಪದ ಹೊಸ್ಮಠದಲ್ಲಿ ಗುಂಡ್ಯ ಹೊಳೆಗೆ ನಿರ್ಮಾಣವಾಗಿದ್ದ ಮುಳುಗು ಸೇತುವೆಯ ಅಂಚಿಗೆ ನೀರು ಹೊಡೆಯುತ್ತಿತ್ತಾದರೂ ಮಧ್ಯಾಹ್ನ ವೇಳೆಗೆ ಮುಳುಗಡೆಯಾಗಿದೆ. ಘಾಟ್ ತಪ್ಪಲಿನಲ್ಲಿ ಮಳೆಯ ಅಬ್ಬರ […]

ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಕೇಂದ್ರ ಸರಕಾರದ ನೋಟು ಅಮಾನೀಕರಣಕ್ಕೆ‌ ಖಂಡನೆ ► ಕಡಬ ಬ್ಲಾಕ್ ಕಾಂಗ್ರೆಸ್‌ನಿಂದ ಕರಾಳ‌ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.08. ಕಳೆದ 2016 ರ ನವೆಂಬರ್ 08 ರಂದು ಕೇಂದ್ರ ಸರಕಾರ ಹಳೆ ನೋಟು ಅಮಾನೀಕರಣಗೊಳಿಸಿರುವುದನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರಾಳ ದಿನವನ್ನಾಗಿ ಆಚರಿಸಲಾಯಿತು. ಕೇಂದ್ರ ಸರಕಾರದ ವಿರುದ್ಧ ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತಹಶಿಲ್ದಾರರ ಮೂಲಕ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ, ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಜಿ.ಪಂ. ಸದಸ್ಯ

ಕೇಂದ್ರ ಸರಕಾರದ ನೋಟು ಅಮಾನೀಕರಣಕ್ಕೆ‌ ಖಂಡನೆ ► ಕಡಬ ಬ್ಲಾಕ್ ಕಾಂಗ್ರೆಸ್‌ನಿಂದ ಕರಾಳ‌ ದಿನಾಚರಣೆ Read More »

ಕರಾವಳಿ

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ಧರ್ಮಸ್ಥಳ – ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿನ ಕಿರು ಸೇತುವೆಯು ಜಲಾವೃತಗೊಂಡಿದ್ದು, ರಸ್ತೆ ತಡೆ ಉಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದೆ. ಇದರಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳನ್ನು ಹಾಗೂ ಉಪ್ಪಿನಂಗಡಿ, ಮಂಗಳೂರು ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದು, ನೀರು ಕಡಿಮೆಯಾಗುವವರೆಗೆ ಕಾಯಬೇಕಾಗಿದೆ.

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ

ಪ್ರಸಕ್ತ ವರ್ಷದಲ್ಲಿ ಮೊದಲ ಸಲ ಮುಳುಗಡೆಯಾದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜು.20. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಳುಗೆ ಸೇತುವೆಯೆಂದೇ ಖ್ಯಾತಿ ಪಡೆದಿರುವ ಹೊಸ್ಮಠ ಸೇತುವೆಯು ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ ಮುಳುಗಡೆಯಾಗಿದೆ. ನೂತನ ಸೇತುವೆಯ ಕಾಮಗಾರಿ ನಡೆಯುತ್ತಿದ್ದರೂ, ಪೂರ್ತಿಯಾಗದ ಕಾರಣ ಹಳೇ ಸೇತುವೆಯನ್ನು ಕಾಯುವ ಪರಿಸ್ಥಿತಿ ಪ್ರಯಾಣಿಕರದ್ದಾಗಿದೆ. ಸೇತುವೆ ಮುಳುಗಡೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ಸವಾರರು ಇಚಿಲಂಪಾಡಿ ಮೂಲಕ ಸುತ್ತು ಬಳಸಿ ಪ್ರಯಾಣಿಸಬೇಕಿದೆ‌. ಕಡಬ ಪೊಲೀಸರು ಸ್ಥಳದಲ್ಲಿದ್ದು, ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಮೊದಲ ಸಲ ಮುಳುಗಡೆಯಾದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ
Scroll to Top