bridge

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 17. ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರನ್ನು ಕ್ಯಾಬ್‌ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.   ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನುಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ ಪ್ರದೇಶದ ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿದ ಮಹಿಳೆ ರೀಮಾ, ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ […]

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.31. ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ವಾಹನ ಉರುಳಿ ಬಿದ್ದ ಪರಿಣಾಮ ನಂದಿನಿ ಹಾಲಿನ ನೂರಾರು ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು, ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋಗಿ ಹಾಲು ಮಣ್ಣು ಪಾಲಾಗಿದೆ. ಚೆನ್ನಾಗಿರುವ ಹಾಲಿನ ಪ್ಯಾಕೆಟ್ ಗಳನ್ನು ಬೇರೊಂದು ವಾಹನದಲ್ಲಿ ಬೆಳ್ಳೂರಿಗೆ ಸಾಗಿಸಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಒಂದಷ್ಟು ಸಣ್ಣಪುಟ್ಟ ಗಾಯಗಳಾಗಿದ್ದು,

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!! Read More »

ಕರಾವಳಿ

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ಧರ್ಮಸ್ಥಳ – ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿನ ಕಿರು ಸೇತುವೆಯು ಜಲಾವೃತಗೊಂಡಿದ್ದು, ರಸ್ತೆ ತಡೆ ಉಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದೆ. ಇದರಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳನ್ನು ಹಾಗೂ ಉಪ್ಪಿನಂಗಡಿ, ಮಂಗಳೂರು ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದು, ನೀರು ಕಡಿಮೆಯಾಗುವವರೆಗೆ ಕಾಯಬೇಕಾಗಿದೆ.

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ

ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.31. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತದೇಹ ಸೋಮವಾರದಂದು ಸೇತುವೆಯ ಸುಮಾರು 300 ಮೀಟರ್ ಕೆಳಗಡೆ ಕಂಡುಬಂದಿದೆ. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬೆಳಿಗ್ಗೆ ಮನೆಯಿಂದ ಹೊರಟ್ಟಿದ್ದ ಅವರು ಕಡಬಕ್ಕೆ ಬಂದು ಅಲ್ಲಿಂದ

ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ Read More »

ಕರಾವಳಿ

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ

(ನ್ಯೂಸ್ ಕಡಬ) newskadaba.com ಕಡಬ, ಜು.30. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ವ್ಯಕ್ತಿಯೋಬ್ಬರು ಹಾರಿದ್ದು, ಅವರು ನದಿ ನೀರಿನಲ್ಲಿ ನಾಪತ್ತೆಯಾದ ಘಟನೆ ಜು.29ರಂದು ಮಧ್ಯಾಹ್ನ ವೇಳೆ ನಡೆದಿತ್ತು. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿದ ವ್ಯಕ್ತಿ. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಪಾಲರವರು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್‌ ಒಂದರಲ್ಲಿ ಉದ್ಯೋಗದಲ್ಲಿದ್ದು ಒಂದು ವಾರದ ಹಿಂದೆಯಷ್ಟೆ ಊರಿಗೆ ಬಂದಿದ್ದರು.

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ Read More »

ಕರಾವಳಿ

ಸೇತುವೆ ಕಾಮಗಾರಿ ನಡೆದರೂ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ, ಈ ವರ್ಷವೂ ನೆರೆ ನೀರಿನ ಭೀತಿ ತಪ್ಪಿಲ್ಲ….!

(ನ್ಯೂಸ್ ಕಡಬ) newskadaba.com ಕಡಬ, ಜು.23. ಇಲ್ಲಿಗೆ ಸಮೀಪದ ಹೊಸಮಠ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಮುಗಿದರೂ ಸೇತುವೆಯ ಸಂಪರ್ಕ ರಸ್ತೆ ನಿರ್ಮಾಣವಾಗದೆ ಈ ವರ್ಷವೂ ಹೊಸಮಠದ ಹಳೇ ಸೇತುವೆ ಮುಳುಗಡೆಗೊಂಡು ಜನರು ಸುತ್ತು ಬಳಸಿ ಪ್ರಯಾಣಿಸಬೇಕಾಗಿದೆ. ಹೊಸ ಸೇತುವೆ ಕಾಮಗಾರಿ ಪುರ್ಣಗೊಂಡರೂ ಸಂಪರ್ಕ ರಸ್ತೆ ನಿರ್ಮಾಣವಾಗದೆ ಈ ವರ್ಷವೂ ಹಳೆ ಸೇತುವೆಯನ್ನು ಬಳಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ನೆರೆ ಭೀತಿ ಹಾಗೂ ಅಪಾಯ ಇನ್ನೂ ಅಬಾಧಿತವಾಗಿದೆ. ಈ ಭಾಗದ ಜನತೆಯ ಬಹು ನಿರೀಕ್ಷೆಯ ಬೃಹತ್ ಸೇತುವೆ

ಸೇತುವೆ ಕಾಮಗಾರಿ ನಡೆದರೂ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ, ಈ ವರ್ಷವೂ ನೆರೆ ನೀರಿನ ಭೀತಿ ತಪ್ಪಿಲ್ಲ….! Read More »

ಕರಾವಳಿ

ಕಳೆದೆರಡು ದಿನಗಳಿಂದ ಸುರಿಯುತ್ತಿರು ಭಾರೀ ಮಳೆ ► ಸುಬ್ರಹ್ಮಣ್ಯ ಕುಮಾರಧಾರಾ ಹಳೆ ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.19. ಕರಾವಳಿ ಜಿಲ್ಲೆಯಾದ್ಯಂತ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ಕುಮಾರಧಾರಾ ಹಳೆ ಸೇತುವೆಯು ಮಳೆ ನೀರಿನಿಂದಾಗಿ ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರಾ ಸ್ನಾನಘಟ್ಟವೂ ಜಲಾವೃತವಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರವಾತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ

ಕಳೆದೆರಡು ದಿನಗಳಿಂದ ಸುರಿಯುತ್ತಿರು ಭಾರೀ ಮಳೆ ► ಸುಬ್ರಹ್ಮಣ್ಯ ಕುಮಾರಧಾರಾ ಹಳೆ ಸೇತುವೆ ಮುಳುಗಡೆ Read More »

ಕರಾವಳಿ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪುತ್ತೂರು ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾದ ಸೇತುವೆಯಲ್ಲಿ ಬುಧವಾರ ರಾತ್ರಿಯಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸೇತುವೆ ಉದ್ಘಾಟನೆಗೂ ಮುನ್ನ ಸಂಚಾರ ಆರಂಭವಾಗಿದ್ದು ಜನ ಸಂತಸ ಪಟ್ಟಿದ್ದಾರೆ. ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಕಾಮಗಾರಿ ಮುಗಿದು ಎರಡು ತಿಂಗಳುಗಳೇ ಕಳೆದಿದ್ದರೂ ಉದ್ಘಾಟನೆಗಾಗಿ ಸಂಚಾರವನ್ನು ತಡೆಹಿಡಿಯಲಾಗಿತ್ತು. ಹಲವು ಸಲ ಉದ್ಘಾಟನೆ ದಿನಾಂಕ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಇತ್ತ ಜನತೆ ಸೇತುವೆ ಕಾಮಗಾರಿ ಮುಗಿದರೂ ಸಂಚಾರ ಮುಕ್ತಗೊಳಿಸಲು ಒತ್ತಾಯಿಸುತ್ತಿದ್ದರು. ಬುಧವಾರ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ Read More »

ಕರಾವಳಿ
Scroll to Top