ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಅ.16. ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಫೆನ್ಸ್‌ ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್