bus

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ

(ನ್ಯೂಸ್‌ ಕಡಬ) newskadaba.com,  ಸೆ.08 ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅಭಿವೃದ್ದಿ ಹೊಂದುತ್ತಿರುವ ಮಂಗಳೂರು ನಗರದ ಕೆಲವು ರಸ್ತೆಗಳು ಯಾವ ದುಸ್ಥಿತಿಯಲ್ಲಿವೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆ ನಗರದ ಕೆಲವೆಡೆ ಡ್ರೈನೇಜ್ ಹೋಲ್ ಗಳು ಬಾಯ್ದೆರೆದು ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ಸನ್ನಿವೇಶಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇದೇ ರೀತಿಯ ಸಮಸ್ಯೆ ಮಂಗಳೂರಿನ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕಂಡು ಬಂದಿದೆ. ಈ ಭಾಗದಲ್ಲಿ ಕಾಪಿಕಾಡ್ ಗೆ ಹೋಗುವ […]

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ಏತನ್ಮಧ್ಯೆ, ಬೆಂಗಳೂರು ಮಹಾನಗರ ಸಾರಿಗೆ

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ Read More »

ಕರ್ನಾಟಕ

ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಗುರುವಾರದಂದು ಬೆಳಗ್ಗೆ ಪುತ್ತೂರು ನಗರದ ಬೊಳುವಾರಿನಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿವೇಕಾನಂದ ಪಿಯು ಕಾಲೇಜಿನ ಪವನ್ ಕುಮಾರ್ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಎಂದು ಗುರುತಿಸಲಾಗಿದೆ. ಅವರು ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದು, ಬಸ್ಸಿನ ಫುಟ್‌ ಬೋರ್ಡ್‌ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಆ. 28. ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸೋಮವಾರದಂದು ನಡೆದಿದೆ. ಅಪಘಾತದ ರಭಸಕ್ಕೆ ಕ್ವಾಲಿಸ್ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ Read More »

ಕರ್ನಾಟಕ

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಇವರು, ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್     Read More »

ಕರಾವಳಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್ Read More »

ಕರ್ನಾಟಕ

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಛತ್ತೀಸ್‌ಗಢ, ಜೂ  . 19  .  ವೇಗವಾಗಿ ಬಂದ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ  26 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ನಡೆದಿದೆ, ಫೋನ್‌ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವ ಸಂಧರ್ಭದಲ್ಲಿ  ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ದಿನನಿತ್ಯದ ಓಡಾಟಕ್ಕೆ ಸಮೂಹ ಸಾರಿಗೆಯನ್ನೇ ನಂಬಿಕೊಂಡಿರುವ ಸಾರ್ವಜನಿಕರು, ನಾಡಿದ್ದು ಬಸ್​ಗಳನ್ನು ನಂಬಿಕೊಂಡು ಹೊರಗೆ ಹೊರಡದಿರುವುದು ಒಳಿತು. ಏಕೆಂದರೆ, ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ಜ.24ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯ ಸರ್ಕಾರವು 6 ವರ್ಷಗಳೇ ಕಳೆದರೂ

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ

ಜನವರಿ 16 ರಿಂದ ಬೆಂಗಳೂರು- ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್‌ ಸೇವೆ ಆರಂಭ  

(ನ್ಯೂಸ್ ಕಡಬ) newskadaba.com   ಬೆಂಗಳೂರು, ಜ.14. ಜನವರಿ 16 ರಿಂದ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣವು ತ್ವರಿತ, ಸುಗಮ ಮತ್ತು ಶೂನ್ಯ ಹೊರಸೂಸುವಿಕೆಯೊಂದಿಗೆ ಶಬ್ದರಹಿತವಾಗಿರುತ್ತದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್‌.ಟಿ.ಸಿ) ತನ್ನ ಮಹತ್ವಾಕಾಂಕ್ಷೆಯ ಎಲೆಕ್ಟ್ರಿಕ್ ಬಸ್ ಸೇವೆಯ ವಾಣಿಜ್ಯ ಕಾರ್ಯಾಚರಣೆಯನ್ನು ಬೆಂಗಳೂರಿನಿಂದ ಮೈಸೂರಿಗೆ 300 ರೂಪಾಯಿಗಳ ಟಿಕೆಟ್ ದರದೊಂದಿಗೆ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಂಗಳೂರಿನಿಂದ ಆರು ಮಾರ್ಗಗಳಲ್ಲಿ 50 ಇ-ಬಸ್‌ ಸೇವೆಯನ್ನು ಆರಂಭಿಸುವ ನಿರೀಕ್ಷೆಯಿದೆ. ಇ-ಬಸ್‌ಗಳು ಉತ್ತಮ ಸಸ್ಪೆನ್ಶನ್ ನೀಡುತ್ತವೆ ಮತ್ತು

ಜನವರಿ 16 ರಿಂದ ಬೆಂಗಳೂರು- ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್‌ ಸೇವೆ ಆರಂಭ   Read More »

ಕರ್ನಾಟಕ
Scroll to Top