ಕಾರು ಅಪಘಾತ: ಅಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.
ಕಾರು ಅಪಘಾತ: ಅಪಾಯದಿಂದ ಪಾರು Read More »
ಕರಾವಳಿ, ಕ್ರೈಮ್ ನ್ಯೂಸ್
