car accident

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ […]

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ

ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com ಚಾರ್ಮಾಡಿ, ಫೆ. 19. ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 20 ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಸೋಮವಾರದಂದು ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಳೆಗೆ ಬಿದ್ದಿದೆನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 04. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರದಂದು ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆನ್ನಲಾಗಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾನುವಾರುಗಳ ಮೇಲೆ ಹರಿದ ಕಾರು- ಮೂರು ಜಾನುವಾರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 09. ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳ ಮೇಲೆ ಹರಿದಿದ್ದು, ಪರಿಣಾಮ ಮೂರು ಜಾನುವಾರುಗಳು ಸಾವನ್ನಪ್ಪಿವೆ.

ಜಾನುವಾರುಗಳ ಮೇಲೆ ಹರಿದ ಕಾರು- ಮೂರು ಜಾನುವಾರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 13. ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ್ ಕುಮಾರ್ ಭೋಜಪ್ಪ ಚೌಹಾಣ್, ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ ಹಾಗೂ ಗೌರಮ್ಮ ಹನುಮಗೌಡ ಹಂಡೆವಜೀರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ಅತಿ ವೇಗದಲ್ಲಿ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ. ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ಸಹೋದರನ ಕಾರು ಮೈಸೂರಿನಲ್ಲಿ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಮೈಸೂರಿನ ಕಡಕೊಳ ಬಳಿ ನಡೆದಿದೆ. ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿಯವರ ಮಗ ಹಾಗೂ ಸೊಸೆ ಗಾಯಗೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಸಹೋದರನ ಕಾರು ಮೈಸೂರಿನಲ್ಲಿ ಅಪಘಾತ ➤ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಕಾನ್ಪುರ್,ಸೆ.13, ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ಸಂಚರಿಸುತ್ತಿದ್ದ ವೇಳೆ ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!! Read More »

ರಾಷ್ಟ್ರೀಯ ನ್ಯೂಸ್
Scroll to Top