ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಬಡವರ ಅನ್ನಭಾಗ್ಯವನ್ನು ಕಸಿದುಕೊಂಡ ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ಕೇಂದ್ರ ಸರಕಾರ ಬಡವರಿಗೆ ವಿತರಿಸಲು ಅಕ್ಕಿ ನೀಡದೇ ಬಡವರ ಅನ್ನವನ್ನು ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು. ಯಾರು ಏನೇ ಮಾಡಿದರೂ ರಾಜ್ಯ ಸರಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ […]
ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ Read More »
ಕರಾವಳಿ

