charmagantu roga

ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆ ಭೀತಿ ➤  ʼಜಾತ್ರೆಗೆ ಎತ್ತಿನಗಾಡಿ ನಿಷೇಧʼ !

(ನ್ಯೂಸ್ ಕಡಬ)newskadaba.com  ಕಾರವಾರ, ಜ.24. ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ ಸಮಸ್ಯೆ ಎದುರಾಗುತ್ತಿದ್ದಂತೆ ಕಾರವಾರದ ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆಗೆ ಎತ್ತಿನಗಾಡಿ ನಿಷೇಧ ಮಾಡಲಾಗಿದೆ. ಉಳವಿ ಚನ್ನಬಸವೇಶ್ವರ ಸ್ವಾಮಿ ಜಾತ್ರೆಯೂ ಜ. 28ರಿಂದ ಫೆ. 8ರವರೆಗೆ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯ ಕೇಂದ್ರವಾಗಿದ್ದ ಎತ್ತಿನಬಂಡಿಗೆ ವಿಶೇಷ ರೀತಿಯಲ್ಲಿ ಸಿಂಗರಿಸುವುದು ಮಾಡುವುದೇ ಇಲ್ಲಿನ ಪರಂಪರೆಯಾಗಿದೆ. ಉಳವಿ ಚನ್ನಬಸವೇಶ್ವರ ಜಾತ್ರೆ ಸಿದ್ದತೆಯಲ್ಲಿದ್ದ ಜನರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದ ಬೆನ್ನಲ್ಲೇ ಭಕ್ತರ ನಿರಾಸೆ […]

ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆ ಭೀತಿ ➤  ʼಜಾತ್ರೆಗೆ ಎತ್ತಿನಗಾಡಿ ನಿಷೇಧʼ ! Read More »

ಕರಾವಳಿ

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವ ಮೂಲಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ Read More »

ಕರ್ನಾಟಕ

ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ರಾಜ್ಯದಲ್ಲಿ  ಚರ್ಮಗಂಟು ರೋಗದಿಂದ ಸುಮಾರು 21,305 ಜಾನುವಾರುಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಸುಮಾರು 230 ತಾಲೂಕುಗಳಲ್ಲಿ ಈವರೆಗೆ 2,37,194 ಜಾನುವಾರುಗಳಿಗೆ ಚರ್ಮಗಂಟು ರೋಗ ಬಾಧಿಸಿವೆ. ಇದರ ಪೈಕಿ 1.64 ಲಕ್ಷ ಜಾನುವಾರುಗಳು ಚೇತರಿಸಿಕೊಂಡಿವೆ ಎನ್ನಲಾಗಿದೆ. ಇನ್ನುಳಿದ ಜಾನುವಾರುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಜಾನುವಾರುಗಳ ಮಾಲಕರಿಗೆ ಈಗಾಗಲೇ ಮುಖ್ಯಮಂತ್ರಿಗಳು 37 ಕೋಟಿ ರೂ ಪರಿಹಾರ ಧನ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top