ತನ್ನ ಯಾತ್ರೆಯ ಮೂಲಕ ಕ್ರಿಸ್ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ […]



