ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ
(ನ್ಯೂಸ್ ಕಡಬ) newskadaba.com, ಆ.22 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದು ಅವರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಕ್ಕೆ ಪರಿಹಾರ ನೀಡವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, […]

