cm siddaramaiah

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ. ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..! Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಸೆ. 24. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಮತ್ತು ಸಿಎಂ ನಡುವಿನ ಕಾನೂನು ಸಮರದಲ್ಲಿ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಗರಣಕ್ಕೆ ಸಂಬಂಧಿಸಿ ರಾಜ್ಯಪಾರ ಕ್ರಮವನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಮುಡಾ ಪ್ರಕರಣದಲ್ಲಿ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌ ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ. ಮಾಧ್ಯಮ ವರದಿಯ ಪ್ರಕಾರ, ಇಂತಹ ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜೊತೆ ಸಮಾಲೋಚನೆ ನಡೆಸದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಕೇಂದ್ರ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ Read More »

ಕರ್ನಾಟಕ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಮಟ್ಟಹಾಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿ ತಮ್ಮ ಪ್ರಯಾಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ ರವರು, ಬಳಿಕ ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್‌, ಹೈಗ್ರೌಂಡ್ಸ್ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿ, ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದಾಗಿ ಪರಿಶೀಲಿಸಿದರು.

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ Read More »

ಕರ್ನಾಟಕ

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಕೇರಳ ಸರಕಾರದ ರೀತಿಯಲ್ಲಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಇಂದು ಫೈರ್ ತಂಡ ಸಿಎಂ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಿತ್ತು.   ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಇದು ಗಂಭೀರವಾದ ವಿಚಾರ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ Read More »

ಕರ್ನಾಟಕ

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 03. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು, ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ನಿಯಮಗಳಿಗೆ

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ Read More »

ಕರ್ನಾಟಕ

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಎಂಟ್ರಿಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನಹರಿಸಿ ಎಂದು

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ Read More »

ಕರ್ನಾಟಕ
Scroll to Top