cm siddaramaiah

ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿ ತೀರ್ಮಾನ ಮಾಡಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರ ನೀಡುತ್ತಾ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಮಾತನಾಡಿದ ಹೆಚ್ಡಿಕೆ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ […]

ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..! Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ ವಿರೇಂದ್ರ ಹೆಗ್ಗಡೆ- ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 14. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಅವರು 14ನೇ ರಾಜ್ಯ ಬಜೆಟ್ ಮಂಡಿಸಿದ್ದು ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಮಂಜುನಾಥೇಶ್ವರನಿಗೆ ಮಹಿಳೆಯರು ಸೇವೆ ಮತ್ತು ಕಾಣಿಕೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಜೈನ ಸಮುದಾಯಕ್ಕೆ ವಿಶೇಷ

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ ವಿರೇಂದ್ರ ಹೆಗ್ಗಡೆ- ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ Read More »

ಕರ್ನಾಟಕ

ಹೊಸ ಶಾಸಕರುಗಳಿಗೆ ಇಂದಿನಿಂದ ತರಬೇತಿ ಶಿಬಿರ ➤ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. 16ನೇ ವಿಧಾನಸಭೆಯ ನೂತನ ಶಾಸಕರಿಗೆ ಇಂದಿನಿಂದ ಬೆಂಗಳೂರಿನ ನೆಲಮಂಗಲದ ಮಹದೇವಪುರದ ಕ್ಷೇಮವನದಲ್ಲಿ ಮೂರು ದಿನಗಳವರೆಗೆ (ಜೂ. 26 ರಿಂದ ಜೂ.28) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ

ಹೊಸ ಶಾಸಕರುಗಳಿಗೆ ಇಂದಿನಿಂದ ತರಬೇತಿ ಶಿಬಿರ ➤ ಸಿಎಂ ಸಿದ್ದರಾಮಯ್ಯ ಉದ್ಘಾಟನೆ Read More »

ಕರ್ನಾಟಕ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರಾವಳಿ, ಕರ್ನಾಟಕ

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲಗಳ ಪ್ರಕಾರ, ಸಿಎಂ ಪತ್ನಿ ಪಾರ್ವತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಗೃಹಕಛೇರಿ ಕೃಷ್ಣಾದಲ್ಲಿ ಸಿಎಂ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಕಛೇರಿ ಕೃಷ್ಣಾದಲ್ಲಿ ರಾ. ಆರೋಗ್ಯ ಅಭಿಯಾನ, ಸುವರ್ಣ ರೋಗ್ಯ ಸುರಕ್ಷಾ ಟ್ರಸ್ಟ್, ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಲಭ್ಯತೆ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.

ಗೃಹಕಛೇರಿ ಕೃಷ್ಣಾದಲ್ಲಿ ಸಿಎಂ ಮಹತ್ವದ ಸಭೆ Read More »

ಕರ್ನಾಟಕ

ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ➤ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ. ಅವರು, ನಗರದ ಎಂ.ಜಿ. ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಿಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ, ಜಾಥಾಗೆ ಚಾಲನೆ ನೀಡಿದ ಬಳಿಕ ಮಾತನಾಡಿ, 18 ವರ್ಷದೊಳಗಿನ ಮಕ್ಕಳನ್ನು ಕೆಲಸ ಅಥವಾ ಸೇವೆಗೆ ಬಳಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ

ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ➤ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More »

ಕರ್ನಾಟಕ

ಕಲುಷಿತ ನೀರಿನ ದುರಂತ ಮತ್ತೆ ಮರುಕಳಿಸಿದರೆ ಸಿಇಒ ಅಮಾನತು ➤ ಸಿಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಪುನಃ ಮರುಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೆಯ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು.

ಕಲುಷಿತ ನೀರಿನ ದುರಂತ ಮತ್ತೆ ಮರುಕಳಿಸಿದರೆ ಸಿಇಒ ಅಮಾನತು ➤ ಸಿಎಂ ಖಡಕ್ ಎಚ್ಚರಿಕೆ Read More »

ಕರ್ನಾಟಕ

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ

(ನ್ಯೂಸ್ ಕಡಬ) newskadaba.com ಮಡಂತ್ಯಾರು, ಜೂ. 08. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಎಂಬವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕರವರು ಆದೇಶ ಹೊರಡಿಸಿದ್ದು, “ಪ್ರಸ್ತುತ ಬೆಂಗಳೂರಿನ ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿರುವ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದೆ.

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ Read More »

ಕರಾವಳಿ, ಕರ್ನಾಟಕ

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 05. ಬರುವ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 07ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆದ ಬಳಿಕ ಜು. 07 ರ ಶುಕ್ರವಾರದಂದು ಬಜೆಟ್ ಮಂಡನೆ ಮಾಡಲಾಗುವುದು ಎಂದರು. ಇನ್ನು ಈ

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top