corona

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.31: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆ.1ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 17 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ. ಜು.31ಕ್ಕೆ ಕೋಡಿಂಬಾಡಿ ಮತ್ತು ನೆಲ್ಯಾಡಿಯಲ್ಲಿ ರ್‍ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಕೊರೋನಾ ದೃಢಗೊಂಡವರ ಪಟ್ಟಿ ಸೇರಿ ಮತ್ತು ಸರಕಾರಿ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ದೃಢಗೊಂಡ ಕೊರೋನಾ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಒಂದೇ ಮನೆಯ 48 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ, ಕೊಡಿಪ್ಪಾಡಿ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31:  ಮುಸ್ಲಿಮ್‌ ಸಮುದಾಯದ ಪ್ರಮುಖ ಹಬ್ಬವಾದ ಬಕ್ರೀದ್‌ನ್ನು ಕರಾವಳಿಯಲ್ಲಿ ಆಚರಿಸಲಾಯಿತು.  ಈ ವರ್ಷ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಐವರ್ನಾಡಿನ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಅತಿಕರಮಜಲು ಜಮ್ಮಾ ಮಸೀದಿಯಲ್ಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಬಕ್ರೀದ್ ಆಚರಣೆಯನ್ನ ಮಾಡಲಾಯಿತು. ಬಕ್ರೀದ್‌ ಹಬ್ಬವನ್ನು ಪ್ರವಾದಿ ಇಬ್ರಾಹಿಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್‌ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೊರೊನಾ ಕಾರಣದಿಂದಾಗಿ ಈದ್ಗಾ ಮಸೀದಿ, ಝೀನತ್

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ Read More »

ಕರಾವಳಿ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.   ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.30: ಕೊರೊನಾ ಸಂಕಷ್ಟದ ನಡುವೆ ವರಮಹಾಲಕ್ಷ್ಮಿ ಆಚರಣೆಗೆ ವಿವಿಧ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.ದೇಶದ ದೊಡ್ಡ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬ ಆಚರಿಸಲು ಸಿಲಿಕಾನ್ ಸಿಟಿ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಲವು ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆಯಾದರೂ ನಗರದ ವಿವಿಧೆಡೆ ಇರುವ ಗಾಂಧಿಬಜಾರ್ ಮಾರುಕಟ್ಟೆ, ಲಾಲ್‍ಬಾಗ್, ಗಣೇಶ ದೇವಾಲಯ, ಹೂವಿನ ಮಾರುಕಟ್ಟೆ, ಮೈಸೂರು ರಸ್ತೆ, ಫ್ಲೈ ಓವರ್ ಕೆಳಭಾಗದ ಮಾರುಕಟ್ಟೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ,

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು Read More »

ಕರಾವಳಿ

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಾಳೆ (ಜು.29) ಗುತ್ತಿಗಾರಿನಲ್ಲಿ ಉಚಿತ ಕೋವಿಡ್ 19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಜು.28:  ಗುತ್ತಿಗಾರಿನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ 19 ಪರೀಕ್ಷೆ ನಡೆಯಲಿದೆ.     ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಗುತ್ತಿಗಾರು ಪಂಚಾಯತ್ ಪ್ರಕಟನೆ ತಿಳಿಸಿದೆ.  

ನಾಳೆ (ಜು.29) ಗುತ್ತಿಗಾರಿನಲ್ಲಿ ಉಚಿತ ಕೋವಿಡ್ 19 ಪರೀಕ್ಷೆ Read More »

ಕರಾವಳಿ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ರಾಜ್ಯದಲ್ಲಿ ಇಂದು ಕೂಡ ಕೊರೋನಾ ರಣಕೇಕೆ ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಿಲ್ಲರ್ ಕೊರೋನಾಗೆ ಇಂದು 102 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ , ಜು.28: ಇಂದು ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ -19 ಉಚಿತ ಪರೀಕ್ಷೆ ನಡೆಯುತ್ತಿದೆ.       ಸಾರ್ವಜಿನಕರು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಸಬಹುದು. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೆ ಸುಬ್ರಹ್ಮಣ್ಯದಲ್ಲೇ ಉಳಿದುಕೊಂಡು ಚಿಕಿತ್ಸೆ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ Read More »

ಕರಾವಳಿ

ಸಂಡೇ ಲಾಕ್ ಡೌನ್ ಸದುಪಯೋಗ ➤ ಕಮಿಲ ಬಸ್ ನಿಲ್ದಾನ ಸ್ವಚ್ಛಗೊಳಿಸಿದ ಪ್ರಗತಿ ಬಂಧು ತಂಡ

(ನ್ಯೂಸ್ ಕಡಬ) newskadaba.com ಕಮಿಲ, ಜು.27:  ಕೊರೋನಾ ಹಾವಳಿಯಿಂದ ಬೆಂದುಹೋಗಿರುವ ಕರಾವಳಿಯಲ್ಲಿ ಸಂಡೇ ಲಾಕ್ ಡೌನ್ ಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಸಂಡೇ ಲಾಕ್ ಡೌನ್ ಯಶಸ್ವಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಡೇ ಲಾಕ್ ಡೌನ್ ನನ್ನ ಯುವಕರ ತಂಡವೊಂದು ಸದುಪಯೋಗ ಪಡಿಸಿಕೊಂಡು ಪ್ರಶಂಷೆ ಗೆ ಪಾತ್ರರಾಗುವ ಮೂಲಕ ಉತ್ತಮ ಸಂದೇಶವನ್ನ ನೀಡಿದ್ದಾರೆ.         ಹೌದು, ಕಮಿಲ ಪುಚ್ಚಪ್ಪಾಡಿ ಬಸ್ ನಿಲ್ದಾಣದ ಪರಿಸರವು ಕುಡುಕರ ಹಾವಳಿಯಿಂದ ದುರ್ಣತ ಬೀರುತ್ತ ಅಸಹ್ಯವೆನಿಸುವ

ಸಂಡೇ ಲಾಕ್ ಡೌನ್ ಸದುಪಯೋಗ ➤ ಕಮಿಲ ಬಸ್ ನಿಲ್ದಾನ ಸ್ವಚ್ಛಗೊಳಿಸಿದ ಪ್ರಗತಿ ಬಂಧು ತಂಡ Read More »

ಕರಾವಳಿ, ಕರ್ನಾಟಕ
Scroll to Top