ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ ➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.23. ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ […]










