crime karavali

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 26. ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಆಟೋ ಚಾಲಕ ರಾಧಾಕೃಷ್ಣ ಸಫಲ್ಯ, ಪ್ರಯಾಣಿಕರಾದ ಬಾಬು ನಾಯ್ಕ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ ) newskadaba. com  ನೆಲ್ಯಾಡಿ .ಡಿ.09.  ಬೈಕ್ ಪಲ್ಟಿಯಾದ ಪರಿಣಾಮ ಸಹ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಗಾಯಗೊಂಡ ಸಹ ಸವಾರನನ್ನು ಹರಿದಾಸನ್ ಎಂದು ಗುರುತಿಸಲಾಗಿದೆ.  ಈತ ಶಿರಾಡಿಯಿಂದ ಗುಂಡ್ಯಕ್ಕೆ ಸಿನು ಎಂಬುವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಗುಂಡ್ಯ ಸಮೀಪ  ಈ ಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top