crime news

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 17. ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದುಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 15. ಕೂಲಿ ಕೆಲಸಕ್ಕೆಂದು ತೆರಳಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತ ಮಹಿಳೆಯನ್ನು ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ‌. ಇವರು ಮುಂಡಾಜೆ ಗ್ರಾಮದ ಸೋಮಂತ್ತಡ್ಕ ಗಣೇಶ್ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡರೆನ್ನಲಾಗಿದೆ. ಕೂಡಲೇ ಚಿಕಿತ್ಸೆಗಾಗಿ ಕಕ್ಕಿಂಜೆ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ

ಬೆಳ್ತಂಗಡಿ: ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದುಬಿದ್ದು ಮೃತ್ಯು Read More »

ಕರಾವಳಿ

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ. ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .  

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.21. ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ ಎಂದು ಘೋಷಿಸಲ್ಪಟ್ಟ ಅವಧಿಪೂರ್ವ ಜನಿಸಿದ ನವಜಾತ ಹೆಣ್ಣು ಶಿಶುವೊಂದು ಸ್ಮಶಾನಕ್ಕೆ ಕೊಂಡೊಯ್ದ ವೇಳೆ ಜೀವಂತವಿರುವುದು ಗೊತ್ತಾದ ಘಟನೆ ದೆಹಲಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ 23 ವಾರಗಳ ಗರ್ಭಿಣಿಗೆ ದೆಹಲಿಯ ಎಲ್‌ಎನ್‌ಜೆಪಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿಪೂರ್ವವಾಗಿ ಹೆಣ್ಣು ಶಿಶು ಜನಿಸಿತ್ತು. ಶಿಶುವಿನ ತೂಕ ಕೇವಲ 490 ಗ್ರಾಂ ಇತ್ತು. ಮಗು ಹುಟ್ಟಿದ ಬಳಿಕ ಅದು ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದರು. ಹೀಗಾಗಿ ಅದರ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಕರೆದೊಯ್ಯಲಾಯಿತು. ಅಂತ್ಯಸಂಸ್ಕಾರಕ್ಕೆ

ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ನಡೆದಿದೆ.  ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ ನಡೆದಿದೆ. ಮೇರಿ (55) ಮೃತ ಮಹಿಳೆ.  ಮೇರಿ ಅವರ ಮೈದುನನ ತಿಂಗಳ ಕಾರ್ಯ ಇತ್ತು,  ಹೀಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಗ್ಯಾಸ್ ಸ್ಟವ್‌ನಲ್ಲಿ ಬೆಂಕಿ ಪ್ರಮಾಣ ಹೆಚ್ಚಾಗಿದೆ. ಈ ವೇಳೆ ಪಕ್ಕದಲ್ಲೇ ಇಟ್ಟಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲಾ ವ್ಯಾಪಿಸಿದೆ.

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ರಾಖಿ ಸಾವಂತ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜ. 19. ಆದಿಲ್ ದುರಾನಿ ಅವರನ್ನು ಮದುವೆಯಾದಂದಿನಿಂದ ಸುದ್ದಿಯಲ್ಲಿರುವ ರಾಖಿ ಸಾವಂತ್ ಅವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ ಎಂದು ನಟಿ ಶೆರ್ಲಿನ್ ಚೋಪ್ರಾ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ನಟಿ ಶೆರ್ಲಿನ್ ಚೋಪ್ರಾ ಅವರು ನೀಡಿದ ದೂರಿನಂತೆ ಅಂಬೋಲಿ ಪೊಲೀಸರು ಆಕೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು “ಎಫ್ಐಆರ್ 883/2022 ಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ತಿರಸ್ಕರಿಸಿದ ಬೆನ್ನಲ್ಲೇ ರಾಖಿ ಅವರನ್ನು ಬಂಧಿಸಲಾಗಿದೆ”

ನಟಿ ರಾಖಿ ಸಾವಂತ್ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top