crime news

Theft, crime, Robbery

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ವರದಿಯಾಗಿದೆ. ನೆಲ್ಯಾಡಿಯ   ಗೋಳಿತ್ತೊಟ್ಟು ಗ್ರಾಮದ  ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿದೆ ಎನ್ನಲಾಗಿದೆ. ಸ್ಕರಿಯ ಅವರು  ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ  ಕೂಡ  ಉಜಿರೆ ಆಸ್ಪತ್ರೆಗೆ ತೆರಳಿದ್ದರು.  ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ […]

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 09. ರೈಲು ಢಿಕ್ಕಿ ಹೊಡೆದ ಪರಿಣಾಮ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಮೃತರನ್ನು ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಉಣ್ಣಿ ಕೃಷ್ಣನ್(28) ಎಂದು ಗುರುತಿಸಲಾಗಿದೆ. ಇವರು ಉಪ್ಪಳ ರೈಲು ನಿಲ್ದಾಣದಲ್ಲಿ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್ ಠಾಣೆಗೆ ರೈಲು ಹಳಿಯ ಮೂಲಕ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಥಾಣೆ, ಜ. 05.    ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ವರದಿಯಾಗಿದೆ. ಮೃತ ಮಹಿಳೆಯನ್ನು ಸುನೀತಾ ಕಾಂಬಳೆ (37) ಎಂದು ಗುರುತಿಸಲಾಗಿದೆ. ಪಿಲ್ಲರ್‌ ನಿರ್ಮಾಣಕ್ಕೆಂದು ಅಗೆದ ಹೊಂಡದ ಸಮೀಪ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಹೊರತೆಗೆದಿದ್ದಾರೆ.

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ 

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯ, ಜ. 02. ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನ ದಕ್ಷಿಣದಲ್ಲಿರುವ ಗೋಲ್ಡ್ ಕೋಸ್ಟ್ ಮೇನ್ ಬೀಚ್‌ ನ ಪ್ರವಾಸೋದ್ಯಮ ತಾಣದಲ್ಲಿ ವರದಿಯಾಗಿದೆ. ಎರಡು ಹೆಲಿಕಾಪ್ಟರ್‌ ಗಳು, ಡಿಕ್ಕಿಯಾಗಿ ಸೀ ವರ್ಲ್ಡ್ ರೆಸಾರ್ಟ್‌ನಿಂದ ಹೊರಗಿರುವ ಮರಳಿನ ದಂಡೆಯ ಮೇಲೆ ಬಿದ್ದವು. ತುರ್ತು ಸೇವೆಗಳು ಕರಾವಳಿಯಿಂದ ದೂರದಲ್ಲಿರುವ ಮರಳು ದಂಡೆಗೆ ಪ್ರವೇಶಿಸಲು ಕಷ್ಟಕರವಾಗಿದೆ. ಆದರೂ ಕಾರ್ಯಾಚರಣೆ ಆರಂಭವಾಗಿದೆ ಎಂದು ಆಗ್ನೇಯ ಪ್ರದೇಶದ

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 02. ಮಂತ್ರವಾದಿಯೋರ್ವ ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತನನ್ನು ಅಶೋಕ್ ಕುಮಾರ್ ಎಂಸು ಗುರುತಿಸಲಾಗಿದೆ. ಈ ಬಾಲಕಿಯು ಕಳೆದ 3 ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಯಾವುದೇ ಪ್ರಯೋಜನ ಕಂಡುಬಂದಿರಲಿಲ್ಲ. ಇತ್ತ ಮನೆಯಲ್ಲಿ ಬಾಲಕಿಯ ತಂದೆ ಇಲ್ಲದ ವೇಳೆ ಬಂದ ಮಂತ್ರವಾದಿ ಅಶೋಕ್ ಕುಮಾರ್, ದೆವ್ವ ಹಾಗೂ

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 02. ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಮಹಿಳೆಯೊಬ್ಬರು ಕೆಳಗೆ ಬಿದ್ದು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್ Read More »

ಕರ್ನಾಟಕ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 01. ಹಾವೇರಿಯಲ್ಲಿ ನಡೆದ ಕಾರು ಹಾಗೂ ಬಸ್ ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತ ಮಗುವನ್ನು ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ -ನಿಷಾನ್ ದಂಪತಿ ಪುತ್ರಿ ಇಸಾ ಮರಿಯಂ (2) ಎಂದು ಗುರುತಿಸಲಾಗಿದೆ. ಸಿಯಾದ್ ನ ತಂದೆ ಮುಹಮ್ಮದ್ (65) ಹಾಗೂ ತಾಯಿ ಆಯಿಶಾ (62) ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಮಗು ಮುಹಮ್ಮದ್ ಕಳೆದ ದಿನ ಮೃತಪಟ್ಟಿದ್ದನು. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಇಸಾ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top