crime

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು […]

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಚಿನ್ನಾಭರಣ ಕಳವು: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 21. ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 19 ರಂದು ಕೊಪ್ಪಳ ಜಿಲ್ಲೆ ಕುಸ್ತಗಿ ತಾಲೂಕಿನ ನಿವಾಸಿ ಸಿದ್ದಪ್ಪ ಕೆ ಕೋಡ್ಲಿ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಯ ನಂತರ, ತಂಡವು 374.45 ಗ್ರಾಂ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿದಂತೆ ಅಂದಾಜು 30,00,000 ರೂ

ಚಿನ್ನಾಭರಣ ಕಳವು: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ 2024ರ ನ.17ರಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಪಾದಚಾರಿಗಳಿಗೆ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಆಶೀರ್ವಾದದ ಬಳಿ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಬಾಗಲಕೋಟೆ ಜಿಲ್ಲೆಯ ಜೈನಬಿ ನದಾಫ್ (27) ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಜೈನಬಿಯ ಎಡಗೈ ಮತ್ತು ಕೆನ್ನೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ರಾಯಚೂರು, ನ. 19. ಸಾಲಬಾಧೆ ತಾಳದೆ ರೈತ ಓರ್ವ ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉದಯಕುಮಾರ್ (42) ಎಂದು ಗುರುತಿಸಲಾಗಿದೆ. ಉದಯಕುಮಾರ್ ಲಕ್ಷಗಟ್ಟಲೆ ಸಾಲ ಮಾಡಿದ್ದ ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತನ್ನ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ ವಿರಶೇಟ್ಟಿ ಪಾಟೀಲ್ ಅವರು ಭೇಟಿ ನೀಡಿ

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ

ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ನ. 18. 16 ವರ್ಷದ ಯುವಕನೋರ್ವ ತನ್ನ ಅಪಾರ್ಟ್ ಮೆಂಟ್ ನ 7ನೇ ಅಂತಸ್ತಿನಿಂದ ಕೆಳಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಕೆಳಗ ಬಿದ್ದ ರಭಸಕ್ಕೆ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಯುವಕನ ಈ ರೀತಿಯ ನಡೆಗೆ ಕಾರಣವೇನು ಎಂಬುದನ್ನು ತನಿಖೆ

7ನೇ ಅಂತಸ್ತಿನಿಂದ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್
Death, deadbody, Waterfall

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 18. ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂದು ಗುರುತಿಸಲಾಗಿದೆ. ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top