crime

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಜು.26. ಕೆಟ್ಟ ಶಾಖದ ಅಲೆ ಗ್ರೀಸ್ ದೇಶಕ್ಕೆ ಎದುರಾಗಿದೆ. ಇದರಿಂದಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದೆ. ಈ ಕಾಡ್ಗಿಚ್ಚನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನ ಬಂದಿತ್ತು. ಇನ್ನೂ ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡಿದೆ ಎಂದು ವರದಿಯಾಗಿದೆ.

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್​ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್​ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್​ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು,

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದ್ದು, ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಗಣೇಶ್ ಪುತ್ತೂರು

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.  

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.26. ಹಣದ ವಿಚಾರದಲ್ಲಿ ಹಲ್ಲೆಗೈದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಯಾಹ್ಯ ಕೊಕ್ಕಡ ಎಂಬವರು ನೀಡಿದ ದೂರಿನಂತೆ ಶಿವಪ್ರಸಾದ್ ಪಿ.ಎಂ ಹಾಗೂ ಗಣೇಶ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಯಾಹ್ಯ ನೀಡಿದ  ದೂರಿನಂತೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಯಾಹ್ಯ ಅವರಿಂದ ಶಿವಪ್ರಸಾದ್ ಎಂಬವರು ಅಂದಾಜು 46 ಲಕ್ಷ ಪಡೆದುಕೊಂಡಿದ್ದು, ಈ ಕುರಿತು ಕರಾರು ಪತ್ರ ಮತ್ತು ಚೆಕ್ ಗಳನ್ನು ನೀಡಿದ್ದಾರೆ.

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ

(ನ್ಯೂಸ್ ಕಡಬ) newskadaba.com ಮಲ್ಪೆ, ಜು. 26. ಫೈನಾನ್ಸ್ ಹಣದ ಲೋನ್ ಆಫೀಸರ್ ಬ್ಯಾಂಕಿಗೆ ಪಾವತಿಸದೇ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತ್ ಪೈನಾನ್ಸ್ ಇನ್‌ಕ್ಲ್ಸೂಷನ್ ಲಿಮಿಟೆಡ್ ಶಾಖೆಯ ಕಿದಿಯೂರು ಶಾಖೆಯಲ್ಲಿ ಲೋನ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಎಸ್.ಎಸ್ ಬಡ ಮಹಿಳೆಯರು ಸಂಘದಿಂದ ಸಾಲವಾಗಿ ಪಡೆದುಕೊಂಡ ಹಣಕ್ಕೆ ಇನ್ನು ಹೆಚ್ಚಿನ ಸಾಲ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ ಸಾಲ ಮರುಪಾವತಿ ಮಾಡುವಂತೆ ತಿಳಿಸಿದ್ದನು. 2021ರ ನ. 27ರಿಂದ 2023ರ ಜೂ. 23ರವರೆಗೆ

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಸಾಗಾಟದ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಕೊಟ್ಟಾರಿ ಕಟ್ಟೆ ಎಂಬಲ್ಲಿ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಕಲ್ಲಡ್ಕದಿಂದ ಪೆರ್ಲ ಕಡೆ ಸಿಮೆಂಟ್ ಸಾಗಾಟದ ಲಾರಿ ನಾಯಿಯೊಂದಕ್ಕೆ ಢಿಕ್ಕಿ ಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ

(ನ್ಯೂಸ್ ಕಡಬ)newskadaba.com ಮೈಸೂರು, ಜು.25. ಮೈಸೂರಿನ ಪ್ರತಿಷ್ಠಿತ ಎಟಿಎಂಇ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಹರ್ಷಿತಾ 200 ವಿದ್ಯಾರ್ಥಿಗಳಿಂದ ಫೀಸ್ ಹಣ ಎಂದು ಬರೋಬ್ಬರಿ 25 ಲಕ್ಷ ರೂ. ಪಡೆದು ವಂಚಿಸಿದ್ದಾರೆ. ಅವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ಹರ್ಷಿತಾ ಪರೀಕ್ಷೆ ಫೀಸ್ ಸಂಗ್ರಹಿಸಿದ್ದಾರೆ. ನಗದು ಮಾತ್ರವಲ್ಲದೆ ವಿದ್ಯಾರ್ಥಿಗಳು ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಪಾವತಿಸಿದ್ದಾರೆ. ಇದಕ್ಕೆ ನಕಲಿ ರಶೀದಿ ನೀಡಿ ಹರ್ಷಿತಾ ಮೋಸ ಮಾಡಿದ್ದಾರೆ. ಈಗಾಗಲೇ

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top