crime

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜು. 22. ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಕೃಷ್ಣ ಪೂಜಾರಿ (57) ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ  ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ

(ನ್ಯೂಸ್ ಕಡಬ)newskadaba.com ವಿಟ್ಲ, ಜು.22. ಮಣ್ಣು ತುಂಬಿದ್ದ ವಾಹನಕ್ಕೆ ಇಕೋ ಢಿಕ್ಕಿಯಾದ ಘಟನೆ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಇಂದು ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತದ್ದ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಡಿಕ್ಕಿಯಾಗಿ ವಾಹನ ಜಖಂಗೊಂಡಿದ್ದು, ಯಾರೂ ಗಾಯಗೊಂಡಿಲ್ಲ ಎಂದು ವರದಿ ತಿಳಿಸಿದೆ.

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಮೇಲೆ ಮಗುಚಿಬಿದ್ದ ಲಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 22. ನಿಯಂತ್ರಣ ತಪ್ಪಿದ ಲಾರಿಯೊಂದು ಮನೆಮೇಲೆ ಬಿದ್ದ ಘಟನೆ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಭಜರಂಗಿ ರೋಡ್ ಲೈನ್ಸ್ ಸಂಸ್ಥೆಗೆ ಸೇರಿದ ಲಾರಿ, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ಕೆಂಪು ಇಟ್ಟಿಗೆ ಕೆಳಕ್ಕೆ ಬಿದ್ದು ಚೆಲ್ಲಾಪಿಲ್ಲಿಯಾಗಿದೆ. ರಸ್ತೆ ಬದಿ ರಾಷ್ಟ್ರೀಯ ಹೆದ್ದಾರಿಯವರು ಹಾಕಿದ್ದ ತಡೆ ಬೇಲಿ ಮುರಿದು ಮನೆಯ ಶೆಡ್ ಮೇಲೆ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಬಂಟ್ವಾಳ: ಮನೆಮೇಲೆ ಮಗುಚಿಬಿದ್ದ ಲಾರಿ Read More »

ಕರಾವಳಿ

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ

(ನ್ಯೂಸ್ ಕಡಬ)newskadaba.com ಹುಣಸೂರು, ಜು.22. ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಭೇಟೆಯಾಡಿ, ಜೋಳದ ಹೊಲದಲ್ಲಿ ಬಚ್ಚಿಟ್ಟಿದ್ದ ಮಾಂಸ, ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪ್ರದೀಪ್ ಅಲಿಯಾಸ್ ಕುಂಡ, ಮಧು ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾಸನ, ಜು.22. ಟಿಪ್ಪರ್ ವಾಹನ ಢಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದು, ಸಂಚಾರಕ್ಕೆ ತೊಡಕುಂಟಾದ ಘಟನೆ ನೇರಳಕಟ್ಟೆ ಎಂಬಲ್ಲಿ ಶನಿವಾರದಂದು ಬೆಳಗ್ಗೆ ನಡೆದಿದೆ. ಮರದ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ತಂತಿಗಳು ನೆಲದ ಮೇಲೆ ಹರಿದಾಡಿತ್ತು. ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು. ಎರಡೂ ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಜು.‌ 22. ವೇಶ್ಯಾವಾಟಿಕೆ ನಡೆಸುತಿದ್ದ ಮನೆಗೆ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಮತ್ತೋರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಬಂಧಿತರನ್ನು ಸಲಾಮತ್ ಮತ್ತು ಚಂದ್ರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ.‌ ಈ

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮುಹಮ್ಮದ್ ಹಫೀಝ್ (20) ಎಂದು ಗುರುತಿಸಲಾಗಿದೆ. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಗುಂಪೊಂದು ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡವೊಂದು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ Read More »

ಕರಾವಳಿ

ಸುಳ್ಯ: ತಲವಾರು ಹಿಡಿದು ಹಲ್ಲೆಗೆ ಯತ್ನ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 22. ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ತಡೆದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಧರ್ಮಲಿಂಗಂ ಎಂಬವರು ಬೆಳ್ಳಾರೆ

ಸುಳ್ಯ: ತಲವಾರು ಹಿಡಿದು ಹಲ್ಲೆಗೆ ಯತ್ನ- ಪ್ರಕರಣ ದಾಖಲು Read More »

ಕರಾವಳಿ
Scroll to Top