crime

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 20. ಕಂಪನಿಯೊಂದರ ಸಿಇಒ ಹಾಗೂ ಎಂಡಿ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಯೋರ್ವ ಕ್ಯಾಶಿಯರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯ ಎಂಬಲ್ಲಿ ನಡೆದಿದೆ. ಮುರುಗೇಶ್ ಪಾಳ್ಯದಲ್ಲಿನ ಹೋಟೆಲೊಂದಕ್ಕೆ ನುಗ್ಗಿದ ಅದೇ ಹೋಟೆಲ್ ನಲ್ಲಿ ಹೌಸ್ ಕೀಪರ್ ಆಗಿ ಕೆಲಸಕ್ಕಿದ್ದ ಅಭಿಷೇಕ್ ಎಂಬಾತ ಕ್ಯಾಶಿಯರ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. […]

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ Read More »

ಕರ್ನಾಟಕ

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ

(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ  ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು.

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿಯಷ್ಟು ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಹಾಗೂ ನಗರದ ಫಳ್ನೀರ್ ನ ಗೂಡಂಗಡಿ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ Read More »

ಕರಾವಳಿ

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜು. 20.‌ ಜನರ ಗುಂಪಿನ ನಡುವೆ ಕಾರು ಹರಿದು ಪೊಲೀಸ್‌ ಸಿಬ್ಬಂದಿಗಳ ಸಹಿತ 9 ಮಂದಿ ಮೃತಪಟ್ಟಿರುವ ಘಟನೆ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ನಡೆದಿದೆ. ಸರ್ಖೇಜ್- ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಟ್ರಕ್‌ ನಡುವೆ ತಡರಾತ್ರಿ ಅಪಘಾತ ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ ಹಲವರು ಜಮಾಯಿಸಿದ್ದರು. ಇದೇ ವೇಳೆ ವೇಗವಾಗಿ ಬಂದ ಜಾಗ್ವಾರ್‌ ಕಾರೊಂದು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಬೆಂಗಳೂರಿಗೆ ಬಾಡಿಗೆಗೆ ಗೊತ್ತುಪಡಿಸಿ, ಚಾಲಕರಿಂದಲೇ ಹಣ ಪಡೆದು ವಂಚಿಸಿ ಅಪರಿಚಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಗಾಂಧಿನಗರ ಪಾರ್ಕಿಂಗ್‌ನಲ್ಲಿರುವ ಗೂಡ್ಸ್‌ ಟೆಂಪೋ ಚಾಲಕರೊಬ್ಬರಲ್ಲಿ ಅಪರಿಚಿತನೋರ್ವ ಬೆಂಗಳೂರಿನ ಕನಕಪುರಕ್ಕೆ ಬಾಡಿಗೆ ಇದೆ. ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಉಪಕರಣಗಳನ್ನು ಸಾಗಿಸಲು ಮೂರು ಗೂಡ್ಸ್‌ ಗಾಡಿ ಬೇಕು. ಅಲ್ಲದೇ ಕನಕಪುರದಿಂದ ಹಿಂದಿರುಗುವಾಗ ವಿದ್ಯುತ್‌ ಟ್ರಾನ್ಸ್‌ಫ‌ರ್‌ ಕೂಡಾ ತರಲಿಕ್ಕಿದೆ. ಅದಕ್ಕೆ (407) ಗೂಡ್ಸ್‌ ಟೆಂಪೋ ಬೇಕು. ನನ್ನಲ್ಲಿ ಕೇಂದ್ರ ಸರಕಾರದ

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಲಕ್ನೋ, ಜು.19. ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ ಲಕ್ನೋದಲ್ಲಿ ನಡೆದಿದೆ. ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಹೀಗೆ ಅವರು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದುರಿನಿಂದ ಬಂದ ಕಾರನ್ನು ಚಾಲಕ

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಗಾಂಜಾ ಸಾಗಾಟ- ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕಿಲೋ ಗಾಂಜಾ ಸಹಿತ ಆರೋಪಿ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೈ ನೆಲ್ಲಂಗುಯಿಯ ಮನೋಜ್ ಥೋಮಸ್ (43) ಎಮದು ಗುರುತಿಸಲಾಗಿದೆ. ಪೊಲೀಸರು ಮಂಗಳವಾರದಂದು ರಾತ್ರಿ ಚೆಮ್ಮಟ ವಯಲ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ ಒಂದೂವರೆ ಕಿಲೋ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಗಾಂಜಾ ಸಾಗಾಟ- ಓರ್ವ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top