crime

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com  ವಿಜಯವಾಡ, ಜು.18. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ‘ಮೋಜಿಗಾಗಿ’ ಉದ್ದೇಶಪೂರ್ವಕವಾಗಿ ಪದೇ ಪದೇ ವಿದ್ಯುತ್ ಶಾಕ್ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ ಎನ್ನಲಾಗಿದೆ. ಈಡುಪುಗಲ್ಲು ಗ್ರಾಮದ ಜಿಲ್ಲಾ ಪರಿಷತ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಓರ್ವ ಬಾಲಕಿ ಪ್ರಜ್ಞೆ ತಪ್ಪಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ಚಿಕಿತ್ಸೆ ಬಳಿಕ ಡಿಸ್ಚಾರ್ಜ್

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ

(ನ್ಯೂಸ್ ಕಡಬ)newskadaba.com  ಹಜಾರಿಬಾಗ್, ಜು.18. ವ್ಯಕ್ತಿಯೊಬ್ಬರಿಂದ ಲಂಚ ಪಡೆದುಕೊಳ್ಳುತ್ತಿದ್ದ ಸರ್ಕಾರಿ ಅಧಿಕಾರಿಣಿಯೊಬ್ಬರನ್ನು ಜಾರ್ಖಂಡ್‌ ನ ಹಜಾರಿಬಾಗ್ ಭ್ರಷ್ಟಾಚಾರ ನಿಯಂತ್ರಣ ದಳ (ಎಸಿಬಿ) ರೆಡ್ ಹ್ಯಾಂಡ್ ಆಗಿ ಹಿಡಿದಿದೆ ಎಂದು ವರದಿಯಾಗಿದೆ. ಬಂಧಿತ ಮಹಿಳಾ ಅಧಿಕಾರಿಯನ್ನು ಮಿಥಾಲಿ ಶರ್ಮಾ ಎಂದು ಗುರುತಿಸಲಾಗಿದ್ದು, ಎಂಟು ತಿಂಗಳ ಹಿಂದೆ ಜಾರ್ಖಂಡ್‌ನ ಕೊಡೆರ್ಮಾದಲ್ಲಿ ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ಆಗಿ ನಿಯೋಜನೆಗೊಂಡಿದ್ದರು. ಇದು ಅವರ ವೃತ್ತಿ ಜೀವನದ ಮೊದಲ ಪೋಸ್ಟಿಂಗ್ ಆಗಿದೆ ಎಂದು ತಿಳಿದುಬಂದಿದೆ.  

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

(ನ್ಯೂಸ್ ಕಡಬ)newskadaba.com ಚೆನ್ನೈ, ಜು.18. ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ(45) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದು, ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕಾಪು, ಜು.18. ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಮೃತ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಇವರು ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದು, ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com ಜಮ್ಮು/ಕಾಶ್ಮೀರ, ಜು. 18. ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಕುರಿತು ಪೂಂಚ್‌ನ ಸಿಂಧ್ರಾ ಪ್ರದೇಶದಿಂದ ವರದಿಯಾಗಿದೆ. ಭಾರತೀಯ ಸೇನಾಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು. ಈ ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು

(ನ್ಯೂಸ್ ಕಡಬ) newsksdaba.com ಪಿರಿಯಾಪಟ್ಟಣ, ಜು. 18. ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಮುದಾಸೀರ್, ಮುಜಾಯಿದ್ ಹಾಗೂ ಅಹ್ಮದ್​​​ ಪಾಷಾ ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top